ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2ನೇ ಶಾಖೆ ಆರಂಭಿಸಲು ಆಗ್ರಹ
ಹರಿಹರ : ನಗರದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) 2ನೇ ಶಾಖೆ ಆರಂಭಿಸಲು ಆಗ್ರಹಿಸಿ, ಬ್ಯಾಂಕ್ ಗ್ರಾಹಕರ ಹಿತ ರಕ್ಷಣಾ ಸಮಿತಿಯಿಂದ ಶುಕ್ರವಾರ ತಹಶೀಲ್ದಾರ್ ಗುರುಬಸವರಾಜ್ ಇವರಿಗೆ ಮನವಿ ನೀಡಲಾಯಿತು.
ಹರಿಹರ : ನಗರದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) 2ನೇ ಶಾಖೆ ಆರಂಭಿಸಲು ಆಗ್ರಹಿಸಿ, ಬ್ಯಾಂಕ್ ಗ್ರಾಹಕರ ಹಿತ ರಕ್ಷಣಾ ಸಮಿತಿಯಿಂದ ಶುಕ್ರವಾರ ತಹಶೀಲ್ದಾರ್ ಗುರುಬಸವರಾಜ್ ಇವರಿಗೆ ಮನವಿ ನೀಡಲಾಯಿತು.
ಮಲೇಬೆನ್ನೂರು : ಪಟ್ಟಣದ ಪುರಸಭೆಗೆ ಕಾಂಗ್ರೆಸ್ ಕಾರ್ಯಕರ್ತರಾದ ಬಿ. ವೀರಯ್ಯ, ಎ. ಆರಿಫ್ ಅಲಿ, ಬುಡ್ಡವರ್ ರಫೀಕ್ ಸಾಬ್, ಎಕ್ಕೆಗೊಂದಿ ಕರಿಯಪ್ಪ ಮತ್ತು ದೊಡ್ಡಮನಿ ಬಸವರಾಜ್ ಅವರನ್ನು ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ಹರಿಹರ : ನಗರದ ಜನತೆಯ ಬಹುದಿನಗಳ ಬೇಡಿಕೆಯಾದ ನೀರು ಶೇಖರಣಾ ಘಟಕದ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಅವರು ನಗರದ ಹಳೇ ದಾವಣಗೆರೆ ವಾಟರ್ ವರ್ಕ್ಸ್ ಬಳಿ ಇರುವ ಖಾಲಿ ಜಾಗಕ್ಕೆ ಭೇಟಿಕೊಟ್ಟು, ಸ್ಥಳ ಮತ್ತು ಕಡತಗಳನ್ನು ಪರಿಶೀಲನೆ ನಡೆಸಿದರು.
ಮಲೇಬೆನ್ನೂರು : ಪಟ್ಟಣದ ಜಿಬಿಎಂ ಶಾಲೆಯ ಆವರಣದಲ್ಲಿ ಶಾಲಾ ಕೊಠಡಿಗಳನ್ನು ಒಡೆದು ಇಂದಿರಾ ಕ್ಯಾಂಟಿನ್ ನಿರ್ಮಾಣ ಮಾಡುವ ಸ್ಥಳಕ್ಕೆ ಸೋಮವಾರ ಉಪ ವಿಭಾಗಾಧಿಕಾರಿ ಶ್ರೀಮತಿ ಎನ್. ದುರ್ಗಾಶ್ರೀ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಮಲೇಬೆನ್ನೂರು : ಅಧಿಕಾರಿಗಳು ಬೇರೆಯವರ ಒತ್ತಡಕ್ಕೆ ಮಣಿದು ತಪ್ಪು ಮಾಡಿದರೆ ಮುಂದೆ ನಿಮ್ಮನ್ನು ಉಳಿಸಲು ಯಾರೂ ಬರಲ್ಲ. ತಪ್ಪು ಮಾಡಿದರೆ ನನ್ನನ್ನೂ ಸೇರಿ ಯಾರಿಗೂ ಉಳಿಗಾಲ ಇಲ್ಲ ಎಂದು ಶಾಸಕ ಬಿ.ಪಿ. ಹರೀಶ್ ಅಧಿಕಾರಿಗಳನ್ನು ಎಚ್ಚರಿಸಿದರು.
ಹರಿಹರ : ನಗರದ ಹೊಳೆ ಮೆಟ್ಟಿಲು ರಸ್ತೆ ಯಲ್ಲಿರುವ ಕಾಶಿ ನೀಲಕಂಠೇಶ್ವರ ದೇವಸ್ಥಾನ ಸಮುದಾಯ ಭವನದಲ್ಲಿ ಕುರುಹಿನಶೆಟ್ಟಿ ಸಮಾಜ ಮಹಿಳಾ ಮಂಡಳಿ ಮತ್ತು ಹೊಲಿಗೆ ತರಬೇತಿ ಶಿಬಿರದ ಉದ್ಘಾಟನೆ ನೆರವೇರಿಸಲಾಯಿತು.
ಹರಿಹರ : ಇಲ್ಲಿನ ನಗರಸಭೆ ಕಟ್ಟಡ ಬಹಳ ಹಳೆಯದಾಗಿರುವ ಪರಿಣಾಮ ಸರ್ಕಾರ ನಗರಸಭೆಗೆ ಹೊಸದಾಗಿ ಕಟ್ಟಡ ನಿರ್ಮಾಣ ಮಾಡುವುದಕ್ಕೆ ಮುಂದಾಗಿದ್ದರಿಂದ, ಹಳೇ ಕಟ್ಟಡದಲ್ಲಿ ದಾಖಲೆಗಳನ್ನು ಎಲ್ಲೆಂದರಲ್ಲಿ ಇಡುವಂತಾಗಿ, ಸಾರ್ವಜನಿಕರು ದಾಖಲೆಗಳನ್ನು ಪಡೆಯುವಾಗ ಸಾಕಷ್ಟು ತೊಂದರೆ ಅನುಭವಿಸಬೇಕಾಗಿತ್ತು.
ಹರಿಹರ : ರಾಜ್ಯದಾದ್ಯಂತ ಸುರಿ ಯುತ್ತಿರುವ ಮುಂಗಾರು ಮಳೆಯಿಂದಾಗಿ ನಗರದ ತುಂಗಭದ್ರಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚು ಆಗುತ್ತಿದ್ದಂತೆ, ಹರಿಯುವ ನೀರಿನ ರಮಣೀಯ ದೃಶ್ಯಗಳನ್ನು ನೋಡಲಿಕ್ಕೆ ಸಾರ್ವಜನಿಕರ ದಂಡು ತುಂಗಭದ್ರಾ ನದಿಯ ಕಡೆಗೆ ಆಗಮಿಸುತ್ತಿದೆ.
ಮಲೇಬೆನ್ನೂರು : ಮಲೆನಾಡಿನಲ್ಲಿ ಸುರಿದ ಮಳೆಯಿಂದಾಗಿ ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದ್ದು, ಶುಕ್ರವಾರ ನಾಲ್ಕು ಕ್ರಸ್ಟ್ ಗೇಟ್ಗಳ ಮೂಲಕ ನದಿಗೆ ನೀರನ್ನು ಬಿಡುಗಡೆ ಮಾಡಲಾಗಿದೆ.
ಹರಿಹರ : ತಾಲ್ಲೂಕಿನಲ್ಲಿ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚು ಆಗುತ್ತಿರುವ ಕಾರಣ ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಸೇರಿದಂತೆ ಯಾವುದೇ ರೀತಿಯ ತೊಂದರೆಗಳು ಆಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾ ಪಂಚಾಯ್ತಿ ಇಲಾಖೆಯ ಲೆಕ್ಕಾಧಿಕಾರಿ ಸೌಮ್ಯಶ್ರೀ ತಿಳಿಸಿದರು.
ಹರಿಹರ : ಆಗುಂಬೆ, ಶೃಂಗೇರಿ ಸೇರಿದಂತೆ ಮಲೆನಾಡು ಪ್ರದೇಶಗಳಲ್ಲಿ ಮುಂಗಾರು ಮಳೆ ಹೆಚ್ಚಾಗಿ ಸುರಿಯುತ್ತಿರುವ ಕಾರಣ ನಗರದ ತುಂಗಭದ್ರಾ ನದಿಯಲ್ಲಿ, ದಿನದಿಂದ ದಿನಕ್ಕೆ, ನೀರಿನ ಹರಿವಿನ ಪ್ರಮಾಣವು ಹೆಚ್ಚಾಗುತ್ತಾ ಸಾಗಿದೆ.
ಮಲೇಬೆನ್ನೂರು : ಮಾದಕ ದ್ರವ್ಯ ಸೇವನೆ ಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಸಂಕಲ್ಪ ಮಾಡಬೇಕೆಂದು ಧರ್ಮಸ್ಥಳ ಯೋಜನೆಯ ಮಲೇಬೆನ್ನೂರು ಯೋಜನಾಧಿಕಾರಿ ವಸಂತ್ ದೇವಾಡಿಗ ಮನವಿ ಮಾಡಿದರು.