ಎಸ್ಸೆಸ್ಸೆಲ್ಸಿ ಫಲಿತಾಂಶ ದಲ್ಲಿ ಜಿಲ್ಲೆ 17ನೇ ಸ್ಥಾನಕ್ಕೆ ಕುಸಿತ ಕಂಡಿದೆ. ಕಳೆದ ವರ್ಷ 9ನೇ ಸ್ಥಾನಕ್ಕೇರುವ ಮೂಲಕ ಹತ್ತರೊಳ ಗೊಂದಾಗಿ ಹೆಮ್ಮೆಯ ಗರಿ ಮೂಡಿಸಿಕೊಂಡಿದ್ದ ಜಿಲ್ಲೆ ದಿಢೀರ್ 8 ಸ್ಥಾನ ಹಿಂದಕ್ಕೆ ಜಿಗಿದಿದೆ.
ದಾವಣಗೆರೆ ಜಿಲ್ಲಾ ಫಲಿತಾಂಶ ಕುಸಿತ: 17ನೇ ಸ್ಥಾನ
ಎಸ್ಸೆಸ್ಸೆಲ್ಸಿ ಫಲಿತಾಂಶ ದಲ್ಲಿ ಜಿಲ್ಲೆ 17ನೇ ಸ್ಥಾನಕ್ಕೆ ಕುಸಿತ ಕಂಡಿದೆ. ಕಳೆದ ವರ್ಷ 9ನೇ ಸ್ಥಾನಕ್ಕೇರುವ ಮೂಲಕ ಹತ್ತರೊಳ ಗೊಂದಾಗಿ ಹೆಮ್ಮೆಯ ಗರಿ ಮೂಡಿಸಿಕೊಂಡಿದ್ದ ಜಿಲ್ಲೆ ದಿಢೀರ್ 8 ಸ್ಥಾನ ಹಿಂದಕ್ಕೆ ಜಿಗಿದಿದೆ.
ತುಂಗಾ, ಭದ್ರಾ ನದಿಯಲ್ಲಿ ನೀರು ಇಳಿಮುಖ
ಶಿವಮೊಗ್ಗ : ಸೋಮವಾರವೂ ಮಲೆನಾಡಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು, ತುಂಗಾ, ಭದ್ರಾ ನದಿಗಳಲ್ಲಿ ನೀರಿನ ಹರಿವು ತಗ್ಗಿದೆ.
ತುಂಗಾ, ಭದ್ರಾ ನದಿಯಲ್ಲಿ ನೀರು ಇಳಿಮುಖ
ಶಿವಮೊಗ್ಗ : ಸೋಮವಾರವೂ ಮಲೆನಾಡಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು, ತುಂಗಾ, ಭದ್ರಾ ನದಿಗಳಲ್ಲಿ ನೀರಿನ ಹರಿವು ತಗ್ಗಿದೆ.
ಆನೆಕೊಂಡದ ಕಾರಣಿಕ, ಜಾತ್ರೆ ರದ್ದು
ಇದೇ ದಿನಾಂಕ 17ರಂದಿನ ಕಡೇ ಶ್ರಾವಣ ಸೋಮವಾರ ನಡೆಯಬೇಕಿದ್ದ ಐತಿ ಹಾಸಿಕ ಶ್ರೀ ಕ್ಷೇತ್ರ ಆನೆಕೊಂಡ ಕಾರಣಿಕ ಮತ್ತು ಜಾತ್ರೆ ಯನ್ನು ರದ್ದುಪಡಿಸಲಾಗಿದೆ
ಮಕ್ಕಳು ದೊಡ್ಡ ಕನಸು ಕಾಣಬೇಕು, ಅಷ್ಟೇ ಶ್ರಮ ಪಡಬೇಕು
ಮಲೇಬೆನ್ನೂರು : ಕಾಗಿನೆಲೆ ಕನಕ ಗುರುಪೀಠದ ಬೆಳ್ಳೂಡಿ ಶಾಖಾ ಮಠದಲ್ಲಿರುವ ಚಂದ್ರಗುಪ್ತ ಮೌರ್ಯ ಶಿಕ್ಷಣ ಸಂಸ್ಥೆಯ ಐಎಎಸ್ ಮತ್ತು ಕೆಎಎಸ್ ಕೋಚಿಂಗ್ ತರಬೇತಿಯನ್ನು ತುಮಕೂರಿನ ಟ್ಯಾಕಲ್ ಅಕಾಡೆಮಿಯ ಅಧ್ಯಕ್ಷ ಡಾ.ಹೆಚ್.ಎಸ್ ನಿರಂಜನಾರಾಧ್ಯ ಉದ್ಘಾಟಿಸಿದರು.
ನಿದ್ದೆಗೆ ಜಾರಿದ ಬಸ್ ಡ್ರೈವರ್: 7 ಜನರಿಗೆ ಗಾಯ
ಹೊನ್ನಾಳಿ : ಶಿವಮೊಗ್ಗದಿಂದ ಹೊನ್ನಾಳಿ ಮಾರ್ಗವಾಗಿ ದಾವಣಗೆರೆಗೆ ಹೋಗುತ್ತಿದ್ದ ಹರಿಹರ ಡಿಪೋಗೆ ಸಂಬಂಧಪಟ್ಟ ಕೆಎಸ್ಸಾರ್ಟಿಸಿ ಬಸ್ನ ಚಾಲಕ ನಿದ್ದೆ ಮಂಪರಿನಲ್ಲಿ ಹೊನ್ನಾಳಿಯ ಬಲ್ಭ್ ಫ್ಯಾಕ್ಟರಿಯ ಬಳಿಯ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಮುಂದಿನ 2 ಚಕ್ರಗಳು ಸಿಡಿದು ಬಸ್ನಲ್ಲಿ ಪ್ರಯಾಣಿಸುತ್ತಿದ್ದ 27 ಪ್ರಯಾಣಿಕರಲ್ಲಿ, ಚಾಲಕ ತೆಲಗಿ ಸಿದ್ದಪ್ಪ ಸೇರಿದಂತೆ 7 ಜನರಿಗೆ ಸಣ್ಣ - ಪುಟ್ಟ ಗಾಯಗಳಾಗಿವೆ.
ಸಾಲದ ಶೂಲ : ಅನ್ನದಾತ ಆತ್ಮಹತ್ಯೆ
ಹೊನ್ನಾಳಿ : ತಾಲ್ಲೂಕಿನ ಹರಳಹಳ್ಳಿ ಗ್ರಾಮದ ರೈತ ಡಿ.ಕೆ. ಕಡೂರಪ್ಪ (48) ಸಾಲ ಬಾಧೆಯಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೊನ್ನಾಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾಷ್ಟ್ರಪ್ರಶಸ್ತಿ : ಅರ್ಜಿ ಆಹ್ವಾನ
ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ, ಸಂಸ್ಥೆಗಳಿಗೆ 2024ನೇ ಸಾಲಿನ ರಾಷ್ಟ್ರ ಪ್ರಶಸ್ತಿಯನ್ನು ನೀಡಲು ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.
ಅಪ್ರಾಪ್ತೆ ಮೇಲೆ ಅತ್ಯಾಚಾರ: 10 ವರ್ಷ ಕಾರಾಗೃಹ ಶಿಕ್ಷೆ, ಲಕ್ಷ ದಂಡ
ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್.ಟಿ.ಎಸ್.ಸಿ-1 ನ್ಯಾಯಾಲಯವು 10 ವರ್ಷ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದೆ.
ಹರಿಹರ : ಜಿಟಿಟಿಸಿ ನೇರ ಪ್ರವೇಶಕ್ಕೆ ಆಹ್ವಾನ
ಹರಿಹರದ ಹರ್ಲಾಪುರದ ಕೆಎಸ್ಆರ್ಟಿಸಿ ಬಸ್ ಡಿಪೋ ಸಮೀಪದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ದಲ್ಲಿ ಡಿಪ್ಲೋಮಾ ಕೋರ್ಸುಗಳ ಉಳಿಕೆ ಸೀಟುಗಳ ನೇರ ಪ್ರವೇಶಕ್ಕೆ ಎಸ್ಸೆಸ್ಸೆಲ್ಸಿ ಪಾಸಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವೀರೇಶ್ವರ ಪುಣ್ಯಾಶ್ರಮದಲ್ಲಿ ಅಂಧ ವಿದ್ಯಾರ್ಥಿಗಳಿಗೆ ಸಂಗೀತ ವಿದ್ಯಾಭ್ಯಾಸ
ನಗರದ ಸುತ್ತಮುತ್ತಲಿನ ಹಳ್ಳಿಗಳಲ್ಲಿನ 10 ರಿಂದ 18ರ ವಯೋಮಾನದ ಒಳಗಿನ ಅಂಧ ಮಕ್ಕಳಿಗೆ ನಗರ ಸಮೀಪದ ಬಾಡಾ ಕ್ರಾಸ್ನಲ್ಲಿರುವ ವೀರೇಶ್ವರ ಪುಣ್ಯಾಶ್ರಮದಲ್ಲಿ ಪಂ. ಪಂಚಾಕ್ಷರ ಗವಾಯಿಗಳವರ ಅಂಧರ ಶಿಕ್ಷಣ ಸಮಿತಿಯಿಂದ ಸಂಗೀತ ವಿದ್ಯಾಭ್ಯಾಸ ಕಲಿಯಲು ಅವಕಾಶವಿರುತ್ತದೆ
ಕೋಡಿ ಕ್ಯಾಂಪ್ ಕೊಟ್ಟೂರೇಶ್ವರ ಸ್ವಾಮಿ ಮಠದಲ್ಲಿ ಇಂದು ಮಣ್ಣೆತ್ತಿನ ಅಮಾವಾಸ್ಯೆ
ನಗರದ ಕೊಟ್ಟೂರು ಶ್ರೀ ಗುರುಬಸವರಾಜೇಂದ್ರ ಸ್ವಾಮಿ ಪಾದಯಾತ್ರೆ ಟ್ರಸ್ಟ್ ಇವರಿಂದ, ಮಾಗಾನಹಳ್ಳಿ ಕೋಡಿ ಕ್ಯಾಂಪ್ ಬಳಿ ಇರುವ ಶ್ರೀ ಗುರು ಕೊಟ್ಟೂರೇಶ್ವರ ಮಹಾಸ್ವಾಮಿ ಪಾದಗಳಿಗೆ ಮಣ್ಣೆತ್ತಿನ ಅಮಾವಾಸ್ಯೆ ಪ್ರಯುಕ್ತ ಇಂದು ಬೆಳಿಗ್ಗೆ 6.30ಕ್ಕೆ ಅಭಿಷೇಕ, ವಿಶೇಷ ಪೂಜೆ ನಡೆಯಲಿದೆ.
`ಎಆರ್ಜಿ ವೈಭವ’ ದಲ್ಲಿ ಇಂದು ಸಾಂಸ್ಕೃತಿಕ ಪರಂಪರೆ
ಎಆರ್ಜಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಇಂದು ಬೆಳಿಗ್ಗೆ 11.30ಕ್ಕೆ ಸಾಂಸ್ಕೃತಿಕ ಪರಂಪರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಗಂಗನರಸಿಯಲ್ಲಿ ಇಂದು ಮಣ್ಣೆತ್ತಿನ ಅಮಾವಾಸ್ಯೆ ವಿಶೇಷ ಪೂಜೆ
ಹರಿಹರ ತಾಲ್ಲೂಕಿನ ಗಂಗ ನರಸಿ ಗ್ರಾಮದ ಶ್ರೀ ಗೋಣಿ ಬಸವೇಶ್ವರ ಹೊರ ಮಠದಲ್ಲಿ ಮಣ್ಣೆತ್ತಿನ ಅಮಾವಾಸ್ಯೆಯ ವಿಶೇಷ ಪೂಜಾ ಕಾರ್ಯಕ್ರಮಗಳು ಇಂದು ಬೆಳಿಗ್ಗೆ 11ಕ್ಕೆ ನಡೆಯಲಿವೆ.
8ರಂದು ನೂತನ ರಥದಲ್ಲಿ ಪುರಿ ಶ್ರೀ ಜಗನ್ನಾಥ ಯಾತ್ರೆ
ಅಂತರರಾಷ್ಟ್ರೀಯ ಕೃಷ್ಣ ಭಾವನಾಮೃತ ಸಂಘ (ಇಸ್ಕಾನ್) ವತಿಯಿಂದ ನಗರದಲ್ಲಿ ಇದೇ ದಿನಾಂಕ 8ರಂದು 3ನೇ ವರ್ಷದ ಪುರಿ ಶ್ರೀ ಜಗನ್ನಾಥ ರಥಯಾತ್ರೆ ಅದ್ಧೂರಿಯಾಗಿ ನಡೆಯಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಇಸ್ಕಾನ್ ಜಿಲ್ಲಾ ಮುಖ್ಯಸ್ಥರಾದ ಅವಧೂತ ಚಂದ್ರ ದಾಸರು ಮನವಿ ಮಾಡಿದರು.
ಐಟಿಐ ಪ್ರವೇಶ: ಅರ್ಜಿ
ಐಟಿಐ ಪ್ರವೇಶಕ್ಕಾಗಿ ಆಫ್ಲೈನ್ ಮುಖಾಂತರ ಪ್ರವೇಶ ಮಾಡಿಕೊಳ್ಳಲು ಅರ್ಜಿ ಆಹ್ವಾನಿ ಸಲಾಗಿದೆ. ಆಗಸ್ಟ್ 31 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಮಾಹಿತಿಗಾಗಿ ಆಯಾ ಸಂಸ್ಥೆಯ ಪ್ರಾಚಾರ್ಯರರನ್ನು ಸಂಪರ್ಕಿಸಬಹುದಾಗಿದೆ.
ಇಂದು ಅಮವಾಸ್ಯೆ : ನಗರದ ದಾನಮ್ಮ ದೇವಿ ದೇವಸ್ಥಾನದಲ್ಲಿ ರುದ್ರಾಭಿಷೇಕ
ನಗರದ ದೊಡ್ಡಪೇಟೆಯಲ್ಲಿರುವ ಶ್ರೀ ಬಸವೇಶ್ವರ ಹಾಗು ಗುಡ್ಡಾಪುರದ ಶ್ರೀ ದಾನಮ್ಮ ದೇವಿ ದೇವಸ್ಥಾನದಲ್ಲಿ ಮಣ್ಣೆತ್ತಿನ ಅಮಾವಾಸ್ಯೆ ಪ್ರಯುಕ್ತ ಇಂದು ಶುಕ್ರವಾರ ಬೆಳಿಗ್ಗೆ ರುದ್ರಾಭಿಷೇಕ, ಮಧ್ಯಾಹ್ನ ಅಲಂಕಾರ ಪೂಜೆ ನಡೆಯುವುದು.
ನಗರದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿಂದು ಅಮಾವಾಸ್ಯೆ ಪೂಜೆ
ಡಿ. ದೇವರಾಜ ಅರಸು ಬಡಾವಣೆಯಲ್ಲಿರುವ ಶ್ರೀ ಮಾತಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಇಂದು ಮಣ್ಣೆತ್ತಿನ ಅಮಾವಾಸ್ಯೆ ಪೂಜಾ ಕಾರ್ಯಕ್ರಮಗಳು ನಡೆಯಲಿವೆ.
ಸಂತೇಬೆನ್ನೂರಿನಲ್ಲಿ ನಾಳೆ ಉದ್ಯೋಗ ಮೇಳ
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ. ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ನಾಡಿದ್ದು ದಿನಾಂಕ 6 ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಗ್ರಾಮ ಸಹಾಯಕ ಹುದ್ದೆಗೆ ಅರ್ಜಿ
ಮಾಯಕೊಂಡ ಹೋಬಳಿಯ ಬಾಡ ವೃತ್ತದ ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಹರಿಹರಕ್ಕೆ ಇಂದು ಕರ್ನಾಟಕ ಜ್ಯೋತಿ ರಥಯಾತ್ರೆ
'ಕರ್ನಾಟಕ ಸಂಭ್ರಮ-50'ರ ಅಂಗವಾಗಿ ಕರ್ನಾಟಕ ಜ್ಯೋತಿ ರಥಯಾತ್ರೆಯು ರಾಜ್ಯಾದ್ಯಂತ ಸಂಚರಿಸುತ್ತಿದ್ದು, ಇಂದು ಬೆಳಿಗ್ಗೆ 9 ಗಂಟೆಗೆ ರಾಣೇಬೆನ್ನೂರು ತಾಲ್ಲೂಕಿನಿಂದ ಹರಿಹರಕ್ಕೆ ಆಗಮಿಸಲಿದೆ. ನಂತರ ಮಧ್ಯಾಹ್ನ 3 ಗಂಟೆಗೆ ಜಗಳೂರಿಗೆ ತೆರಳಲಿದೆ.
ದೂಡಾ ಆಯುಕ್ತರಾಗಿ ಹುಲ್ಲುಮನಿ ತಿಮ್ಮಣ್ಣ
ದಾವಣಗೆರೆ - ಹರಿ ಹರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರನ್ನಾಗಿ ಕಿರಿಯ ಶ್ರೇಣಿ ಕೆಎಎಸ್ ಅಧಿಕಾರಿ ಹುಲ್ಲುಮನಿ ತಿಮ್ಮಣ್ಣ ಅವರನ್ನು ಸರ್ಕಾರ ನಿಯುಕ್ತಿಗೊಳಿಸಿದೆ.
ಬಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ
ಕ್ಷತ್ರಿಯ ಮರಾಠ ವಿದ್ಯಾ ಮತ್ತು ಕಲ್ಯಾಣಾಭಿವೃದ್ಧಿ ಟ್ರಸ್ಟ್ ವತಿಯಿಂದ 2023-24ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ. 75 ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿ ಉತ್ತೀರ್ಣರಾದ ದಾವಣಗೆರೆ ನಗರ ವ್ಯಾಪ್ತಿಯಲ್ಲಿರುವ ಕ್ಷತ್ರಿಯ ಮರಾಠ ಸಮಾಜದ ಬಡ ವಿದ್ಯಾರ್ಥಿನಿಯರಿಗೆ ಪ್ರೋತ್ಸಾಹ ಧನ ನೀಡಲಾಗುವುದು.
ಐಟಿಐ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಐಟಿಐ ಪ್ರವೇಶಕ್ಕಾಗಿ ಆಫ್ಲೈನ್ ಮುಖಾಂತರ ಪ್ರವೇಶ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 31 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಮಾಹಿತಿಗಾಗಿ ಆಯಾ ಸಂಸ್ಥೆಯ ಪ್ರಾಚಾರ್ಯರರನ್ನು ಸಂಪರ್ಕಿಸಬಹುದಾಗಿದೆ.
ಅಹಿಂದ ಒಕ್ಕೂಟಕ್ಕೆ ಮಾಲಾ ಆಯ್ಕೆ
ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಅಹಿಂದ ಅಲ್ಪಸಂ ಖ್ಯಾತರ, ಹಿಂದುಳಿ ದವರ, ದಲಿತರ ಒಕ್ಕೂಟದ ಅಧ್ಯಕ್ಷರಾಗಿ ಮಾಲಾ ನೇಮಕಗೊಂಡಿದ್ದಾರೆ.
ಸಂತೇಬೆನ್ನೂರಿನಲ್ಲಿ ಉದ್ಯೋಗ ಮೇಳ
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಇದೇ ದಿನಾಂಕ 6 ರಂದು ಬೆಳಿಗ್ಗೆ 10 ಗಂಟೆಗೆ ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ನೀಟ್ ಪರೀಕ್ಷೆ ಅಕ್ರಮ : ತನಿಖೆಗೆ ಆಗ್ರಹ
ನೀಟ್ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ವೇಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾಧ್ಯಕ್ಷ ಶಹಬಾಜ್ ಖಾನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ನೀಟ್-ಪಿಜಿ ಪರೀಕ್ಷೆ ಮುಂದೂಡಿಕೆ ಖಂಡನೀಯ
ಪರೀಕ್ಷೆಯ ಹಿಂದಿನ ರಾತ್ರಿ ನೀಟ್-ಪಿಜಿ ಪರೀಕ್ಷೆಯನ್ನು ಮುಂದೂಡಿರುವುದನ್ನು ಎಐಡಿಎಸ್ಓ ಕರ್ನಾಟಕ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಖಂಡಿಸಿದ್ದಾರೆ.
ಕನ್ನಡ ಸಂಸ್ಕೃತಿ ರಕ್ಷಣೆಯ ಕೆಲಸ ಮಾಡುತ್ತಿರುವ ಕಸಾಪ
ಹರಪನಹಳ್ಳಿ : ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ, ಇತಿಹಾಸ ಇವುಗಳ ರಕ್ಷಣೆ ಹಾಗೂ ಅಭಿವೃದ್ಧಿಗಾಗಿ ಕನ್ನಡ ಸಾಹಿತ್ಯ ಪರಿಷತ್ತು ಕೆಲಸ ಮಾಡುತ್ತಿದೆ ಎಂದು ಅಂಬ್ಲಿ ದೊಡ್ಡಭರಮಪ್ಪ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ಎಂ.ಸಿದ್ದಲಿಂಗಮೂರ್ತಿ ಹೇಳಿದರು.
ಹೀರೋ ಕಂಪನಿಯ ಎಲೆಕ್ಟ್ರಿಕಲ್ ವಾಹನ `ವಿಡಾ’ ಪ್ರಕಾಶಾ ಮೋಟಾರ್ಸ್ನಲ್ಲಿ ಬಿಡುಗಡೆ
ದ್ವಿಚಕ್ರ ವಾಹನ ತಯಾರಿಕೆ ಯಲ್ಲಿ ಹೆಸರಾಗಿರುವ ಹೀರೋ ಕಂಪನಿಯು ಇದೀಗ ಎಲೆಕ್ಟ್ರಿಕಲ್ ವಾಹನವನ್ನು ಪರಿಚಯಿಸಿದ್ದು, `ವಿಡಾ' ಹೆಸರಿನ ಈ ವಾಹನ ಮಾರುಕಟ್ಟೆಯಲ್ಲೀಗ ಬೇಡಿಕೆಯಲ್ಲಿದೆ.
ಸಹಕಾರಿ ಕ್ಷೇತ್ರದಲ್ಲಿ ಪ್ರಾಮಾಣಿಕತೆ ಅಗತ್ಯ
ಸಹಕಾರಿ ಕ್ಷೇತ್ರಕ್ಕೆ ಪ್ರಾಮಾಣಿಕತೆ, ಪರಿಶುದ್ಧತೆ ಇಂದಿನ ತುರ್ತು ಅಗತ್ಯವಾಗಿದೆ. ದೇಶದಲ್ಲಿ ಸಹಕಾರಿ ಚಳವಳಿ ಬೆಳೆಯುತ್ತಿದೆ. ಆದರೂ ಸಹಕಾರಿ ಕ್ಷೇತ್ರದಲ್ಲಿನ ಗುಣಮಟ್ಟ ಕ್ಷೀಣಿಸುತ್ತಿದೆ ಎಂದು ಜಿಲ್ಲಾ ಸಹಕಾರ ಸಂಘಗಳ ಇಲಾಖೆ ಉಪನಿರ್ದೇಶಕ ಕೆ. ಮಹೇಶ್ವರಪ್ಪ ವಿಷಾದಿಸಿದರು.
ಹೆಚ್ಚುತ್ತಿರುವ ಬೆನ್ನು ನೋವಿಗೆ ಆಧುನಿಕ ಜೀವನ ಶೈಲಿ ಕಾರಣ
ಹೆಚ್ಚುತ್ತಿರುವ ಬೆನ್ನು ನೋವು ಸಮಸ್ಯೆಗೆ ಇಂದಿನ ಆಧುನಿಕ ಜೀವನ ಶೈಲಿಯ ಮಾರ್ಪಾಡುಗಳೇ ಕಾರಣ ಎಂದು ಪ್ರಶಸ್ತಿ ಪುರಸ್ಕೃತ ಯೋಗ ತಜ್ಞ ರಾಘವೇಂದ್ರ ಗುರೂಜಿ ಅಭಿಪ್ರಾಯಪಟ್ಟರು.
ಟಿ20 ವಿಜೇತರಿಗೆ ಪ್ರಧಾನಿಯಿಂದ ಜನಸಾಮಾನ್ಯರವರೆಗೆ ಬಹುಪರಾಕ್
ಟಿ20 ವಿಶ್ವಕಪ್ ವಿಜೇತರಾಗಿ ಮರಳಿರುವ ಭಾರತೀಯ ಕ್ರಿಕೆಟ್ ತಂಡಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಹಿಡಿದು ಜನಸಾಮಾನ್ಯರವರೆಗೆ ಭವ್ಯ ಸ್ವಾಗತ ಕೋರಿದ್ದಾರೆ.
ಪರಿಸರ ಬದಲಾವಣೆಯಿಂದ ಮನುಕುಲಕ್ಕೆ ಅಸ್ತಿತ್ವದ ಅಪಾಯ
ಕಲಬುರಗಿಯಲ್ಲಿ ಕಂಡು ಬರುತ್ತಿದ್ದ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ಈಗ ದಾವಣಗೆರೆಯಲ್ಲಿ ಕಂಡು ಬರುತ್ತಿದೆ. ಪರಿಸರ ಬದಲಾವಣೆ ಹೀಗೆಯೇ ಮುಂದುವರೆದರೆ ಮನುಕುಲ ಭೂಮಿಯಲ್ಲಿ ಬದುಕಲು ಕಷ್ಟವಾಗುವ ವಾತಾವರಣ ಸೃಷ್ಟಿಯಾಗಲಿದೆ
ಮಾದಕ ದ್ರವ್ಯ ಸೇವನೆ ದೇಶದ ಅತಿ ದೊಡ್ಡ ಪಿಡುಗು
ಹರಪನಹಳ್ಳಿ : ಮಾದಕ ದ್ರವ್ಯ ಸೇವನೆ ನಮ್ಮ ದೇಶದ ಅತೀ ದೊಡ್ಡ ಪಿಡುಗು. ಈ ಪಿಡುಗನ್ನು ತಳ ಮಟ್ಟದಿಂದ ತೊಡೆದು ಹಾಕುವ ಪ್ರಯತ್ನ ನಡೆಯಬೇಕು ಎಂದು ದಾವಣಗೆರೆಯ ವ್ಯಂಗ್ಯ ಚಿತ್ರಕಾರ ಎಚ್.ಬಿ.ಮಂಜುನಾಥ್ ಹೇಳಿದರು.
ಕಾಯಕದಲ್ಲಿ ಶ್ರದ್ಧೆ, ನಿಷ್ಟೆ ಇದ್ದಾಗ ಸುಖ, ಶಾಂತಿ
ಹರಿಹರ : ನಾವು ಮಾಡುವಂತಹ ಕಾಯಕದಲ್ಲಿ ಶ್ರದ್ಧೆ, ಭಕ್ತಿ, ನಿಷ್ಠೆ, ತ್ಯಾಗ, ಸದಾಚಾರ, ಸದ್ಭಾವನಾ ಗುಣಗಳು ಇದ್ದಾಗ, ಭಗವಂತನು ನಮಗೆ ಆಶೀರ್ವಾದದ ರೂಪದಲ್ಲಿ ಬೇಡಿದ ಫಲಗಳನ್ನು ನೀಡುತ್ತಾನೆ ಎಂದು ಕಣಕುಪ್ಪಿ ಗವಿಮಠದ ಶ್ರೀ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಉಕ್ಕಡಗಾತ್ರಿಯಲ್ಲಿ ಜೆಸಿಬಿಯಿಂದ ರುದ್ರಭೂಮಿಯ ಸ್ವಚ್ಛತಾ ಕಾರ್ಯ
ಮಲೇಬೆನ್ನೂರು : ಉಕ್ಕಡಗಾತ್ರಿ ಗ್ರಾಮದ ಸಾರ್ವಜನಿಕ ರುದ್ರಭೂಮಿಯಲ್ಲಿ (ಸ್ಮಶಾನ) ಮುಳ್ಳು ಗಿಡಗಳು ಬೆಳೆದು ಶವ ಸಂಸ್ಕಾರಕ್ಕೆ ಅಡ್ಡಿ ಉಂಟಾಗಿತ್ತು.
ಸಿಲಿಂಡರ್ ಸ್ಫೋಟ: ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ ಜಿಲ್ಲಾಧಿಕಾರಿ
ಇಲ್ಲಿನ ರಾಮನಗರದ ಎಸ್ಒಜಿ ಕಾಲೋನಿ ಮನೆಯಲ್ಲಿ ಮಂಗಳವಾರ ಅಡುಗೆ ಅನಿಲದ ಸಿಲಿಂಡರ್ ಸ್ಫೋಟದಿಂದ ಐವರು ಗಂಭೀರವಾಗಿ ಗಾಯಗೊಂಡಿದ್ದು, ಎಸ್.ಎಸ್.ಹೈಟೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪಠ್ಯದಲ್ಲಿ ಕಂಪ್ಯೂಟರ್ ಸೈನ್ಸ್ ವಿಷಯ ಸೇರಿಸಲು ಮನವಿ
ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅಕಾಡೆಮಿಕ್ ಸಮಿತಿಯು ಬಿ.ಕಾಂ ಪದವಿಯ ಪಠ್ಯಕ್ರಮದಲ್ಲಿ ಕಂಪ್ಯೂಟರ್ ಸೈನ್ಸ್ ವಿಷಯ ಸೇರಿಸಬೇಕು ಎಂದು ವಿವಿಯ ಕುಲಪತಿಗಳಿಗೆ, ಪ್ರದೇಶ ಕಾಂಗ್ರೆಸ್ ಸಮಿತಿಯ ಶಿಕ್ಷಕರು ಹಾಗೂ ಪದವೀಧರ ಘಟಕದ ಮಾಜಿ ರಾಜ್ಯಾಧ್ಯಕ್ಷ ಡಾ.ಆರ್.ಎಂ ಕುಬೇರಪ್ಪ ಒತ್ತಾಯಿಸಿದ್ದಾರೆ.
ಚಾರ್ಟರ್ಡ್ ಅಕೌಂಟೆಂಟ್ಸ್ ಭವನದಲ್ಲಿ ರಕ್ತದಾನ ಶಿಬಿರ
ಚಾರ್ಟರ್ಡ್ ಅಕೌಂಟೆಂಟ್ಸ್ ಅಸೋಸಿಯೇಷನ್ ವತಿಯಿಂದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ಸೋಮವಾರ ಚಾರ್ಟರ್ಡ್ ಅಕೌಂಟೆಂಟ್ಸ್ ದಿನದ ಪ್ರಯುಕ್ತ ಚಾರ್ಟರ್ಡ್ ಅಕೌಂಟೆಂಟ್ಸ್ ಭವದಲ್ಲಿ ರಕ್ತದಾನ ಶಿಬಿರ ನಡೆಯಿತು.
ರೋಟರಿ, ಇನ್ನರ್ವ್ಹೀಲ್ ಸಂಸ್ಥೆಯಿಂದ ವೈದ್ಯರ ದಿನಾಚರಣೆ, ವೈದ್ಯಕೀಯ ಶಿಬಿರ
ರೋಟರಿ ಮತ್ತು ಇನ್ನರ್ವ್ಹೀಲ್ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಈಚೆಗೆ ವೈದ್ಯರ ದಿನಾಚರಣೆ ಮತ್ತು ಉಚಿತ ವೈದ್ಯಕೀಯ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ವಿದ್ಯಾರ್ಥಿಗಳಿಗೆ ನೋಟ್ಬುಕ್, ಪೆನ್ ವಿತರಣೆ
ಮಲೇಬೆನ್ನೂರು : ಬೆಳಲಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ವಿದ್ಯಾರ್ಥಿಗಳಿಗೆ ಬೆಂಗ ಳೂರಿನ ಕೆಡಿಪಿ ಫೌಂಡೇಶನ್ ವತಿಯಿಂದ ಸಂಸ್ಥೆಯ ತಿಪ್ಪೇಶ್, ಶಶಿಕುಮಾರ್, ರಮೇಶ್ ಅವರುಗಳು ನೋಟ್ ಬುಕ್ ಮತ್ತು ಪೆನ್ನು ವಿತರಣೆ ಮಾಡಿದರು.
ಗುಂಪುಗಾರಿಕೆ-ಪಕ್ಷ ವಿರೋಧಿ ಚಟುವಟಿಕೆ ವಿರುದ್ಧ ಉಚ್ಛಾಟನೆಗೆ ವಿಜಯೇಂದ್ರ ಮುಂದಾಗಲಿ
ಹೊನ್ನಾಳಿ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲ್ಲೂಕು ಬಿಜೆಪಿ ಮಾಜಿ ಅಧ್ಯಕ್ಷ ಎ.ಬಿ.ಹನುಮಂತಪ್ಪ ಬಣದಿಂದ ಲೋಕಸಭಾ ಚುನಾವಣಾ ಸೋಲಿನ ಆತ್ಮಾವಲೋಕನದ ಬಗ್ಗೆ ಸಭೆ ನಡೆಯಿತು.
ಕೇಳುಗರ ಮನಗೆದ್ದ `ಸಿನಿ ಹನಿ’ ಗಾನ
ನಗರದ ಕುವೆಂಪು ಕನ್ನಡ ಭವನದಲ್ಲಿ ಸ್ವರತಂತ್ರ ಗಾಯಕರ ತಂಡದ ವತಿಯಿಂದ `ನೂರೊಂದು ನೆನಪು ಹಾಡಾಗಿ ಬಂತು.......' ಶೀರ್ಷಿಕೆಯಡಿ ಏರ್ಪಡಿಸಿದ್ದ `ಸಿನಿಹನಿ' ಕಾರ್ಯಕ್ರಮ ಕೇಳುಗರ ಮನಗೆದ್ದಿತು.
ಹೊಳೆಸಿರಿಗೆರೆ : ಮಲೇರಿಯಾ ವಿರೋಧಿ ಮಾಸಾಚರಣೆ
ಮಲೇಬೆನ್ನೂರು : ಹೊಳೆಸಿರಿಗೆರೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಶ್ರೀ ಮಾಗೋಡ ಹಾಲಪ್ಪ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮವನ್ನು ವೈದ್ಯಾಧಿಕಾರಿ ಡಾ.ಚೇತನ್ ಉದ್ಘಾಟಿಸಿದರು.
ಅಟಲ್ ಬಿಹಾರಿ ವಾಜಪೇಯಿ ಅಭಿಮಾನಿ ಬಳಗದಿಂದ ಶಸ್ತ್ರಚಿಕಿತ್ಸೆಗೆ ಧನಸಹಾಯ
ಜಿಲ್ಲಾ ಅಟಲ್ ಬಿಹಾರಿ ವಾಜಪೇಯಿ ಅಭಿಮಾನಿ ಬಳಗದ ವತಿಯಿಂದ ಅನಾರೋಗ್ಯದಿಂದ ಬಳುತ್ತಿರುವ ಶ್ರೀಮತಿ ಅಕ್ಷತಾ ಮತ್ತು ಮಲ್ಲೇಶ್ ಕಡೇಮನಿ ಅವರುಗಳಿಗೆ ಶಸ್ತ್ರಚಿಕಿತ್ಸೆಗೆ ಧನಸಹಾಯ ಮಾಡಲಾಯಿತು.
ಸಿಲಿಂಡರ್ ಸ್ಫೋಟ : ಮೇಯರ್ ಭೇಟಿ
ಸ್ಥಳೀಯ ರಾಮನಗರದ ಎಸ್ಒಜಿ ಕಾಲೋನಿ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ಸಂಭವಿಸಿದ ಮನೆಗೆ ಮಹಾನಗರ ಪಾಲಿಕೆಯ ಮೇಯರ್ ವಿನಾಯಕ ಪೈಲ್ವಾನ್, ಸದಸ್ಯರಾದ ಗಡಿಗುಡಾಳ್ ಮಂಜುನಾಥ್, ಪಾಮೇನಹಳ್ಳಿ ನಾಗರಾಜ್ ಭೇಟಿ ನೀಡಿದ್ದರು.
ವೈದ್ಯ ಸಮೂಹಕ್ಕೆ ನಾಗರಿಕ ಸಮಾಜ ಋಣಿ
ಗುಣಪಡಿಸುವ ಕೈಗಳ, ಕಾಳಜಿಯುಳ್ಳ ಹೃದಯಗಳ ಅವಿಶ್ರಾಂತವಾಗಿ ಕಾರ್ಯನಿರ್ವಹಿಸುವ ವೈದ್ಯ ಸಮೂಹಕ್ಕೆ ಸಮಾಜ ಎಂದೆಂದಿಗೂ ಋಣಿಯಾಗಿರುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ರಾಜೇಶ್ವರಿ ಎನ್. ಹೆಗಡೆ ನುಡಿದರು.
ಪಾಲಿಕೆ ನಿವೃತ್ತ ನೌಕರರಿಗೆ ಸನ್ಮಾನ
ಮಹಾನಗರ ಪಾಲಿಕೆಯಲ್ಲಿ ನೌಕರರಾಗಿ 30 ವರ್ಷಗಳ ಕಾಲ ಸೇವೆ ಸಲ್ಲಿಸಿ ಮೊನ್ನೆ ನಿವೃತ್ತರಾಗಿರುವ ಹುಲುಗಮ್ಮ ಸೋಮಲಾಪುರ, ಸರೋಜಮ್ಮ ರಂಗಪ್ಪ, ಬಸವರಾಜ ಅವರನ್ನು ಪಾಲಿಕೆ ಸಭಾಂಗಣದಲ್ಲಿ ಮಹಾನಗರ ಪಾಲಿಕೆ ವತಿಯಿಂದ ಸನ್ಮಾನಿಸಲಾಯಿತು.
ಹೊಸ ಸಮಾಜ ನಿರ್ಮಾಣಕ್ಕಾಗಿ ಈಶ್ವರೀಯ ವಿವಿ ಸಂಕಲ್ಪ
ಮಲೇಬೆನ್ನೂರು : ಹೊಸ ಸಮಾಜ ನಿರ್ಮಾಣಕ್ಕಾಗಿ ಈಶ್ವರೀಯ ವಿಶ್ವವಿದ್ಯಾಲಯ ಕಾರ್ಯ ನಿರ್ವಹಿಸುತ್ತಿದ್ದು, ಅಧ್ಯಾತ್ಮಿಕ ಹಾಗೂ ನೈತಿಕ ಶಿಕ್ಷಣದ ಮೂಲಕ ಜನರಲ್ಲಿ ಬದಲಾ ವಣೆಗೆ ಪ್ರಯತ್ನಿಸುತ್ತಿದೆ
ನವಚೇತನ ಕಿಡ್ಸ್ನಲ್ಲಿ ಕಾಂಪೋಸ್ಟ್ ಗೊಬ್ಬರ ತಯಾರಿಸುವ ಕಾರ್ಯಾಗಾರ
ನಗರದ ಶಿವಕುಮಾರ ಸ್ವಾಮಿ ಬಡಾವಣೆಯ ನವಚೇತನ ಕಿಡ್ಸ್ ಪ್ಲೇ ಹೋಂನಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಅಡುಗೆ ಮನೆಯ ಹಸಿ ತ್ಯಾಜ್ಯವನ್ನು ಕಾಂಪೋಸ್ಟ್ ಗೊಬ್ಬರವನ್ನಾಗಿ ಪರಿವರ್ತಿಸುವ ಕಾರ್ಯಾಗಾರವನ್ನು ನಡೆಸಲಾಯಿತು.
ಜಗಳೂರು : ಅಣಬೂರಿನ ಜಯಣ್ಣ ನಿವೃತ್ತಿ
ಜಗಳೂರು : ಸುದೀರ್ಘ ಕಾಲ ಸೇವೆ ಸಲ್ಲಿಸಿ, ನಿವೃತ್ತಿಯಾಗುತ್ತಿರುವ ಎ.ಎಂ.ಜಯ್ಯಣ್ಣ ಅವರ ಮುಂದಿನ ಜೀವನ ಸುಖವಾಗಿರಲಿ ಎಂದು ಜ್ಞಾನ ವಿಕಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಮನೋಹರ್ ರೆಡ್ಡಿ ಹೇಳಿದರು.
ಕೆ.ಎನ್.ಹಳ್ಳಿ ಗ್ರಾ.ಪಂ ಅಧ್ಯಕ್ಷರಾಗಿ ಗಿರಿಜಮ್ಮ
ಮಲೇಬೆನ್ನೂರು : ಕೆ.ಎನ್.ಹಳ್ಳಿ ಗ್ರಾಮ ಪಂಚಾಯ್ತಿ ನೂತನ ಅಧ್ಯಕ್ಷರಾಗಿ ಶ್ರೀಮತಿ ಗಿರಿಜಮ್ಮ ಕರಿಯಪ್ಪ ಅವರು ಮಂಗಳವಾರ ನಡೆದ ಚುನಾವಣೆಯಲ್ಲಿ ಆವಿರೋಧವಾಗಿ ಆಯ್ಕೆಯಾಗಿದ್ದಾರೆ. ಶ್ರೀಮತಿ ಮಂಜಮ್ಮ ಶೇಖರಪ್ಪ ಅವರ ರಾಜೀನಾಮೆಯಿಂದಾಗಿ ಅಧ್ಯಕ್ಷ ಸ್ಥಾನ ತೆರವಾಗಿತ್ತು.
ಉಕ್ಕಡಗಾತ್ರಿ ಗ್ರಾ.ಪಂ. ಉಪಾಧ್ಯಕ್ಷರಾಗಿ ಗೀತಾ ಸಂಜೀವ ರೆಡ್ಡಿ
ಮಲೇಬೆನ್ನೂರು : ಉಕ್ಕಡಗಾತ್ರಿ ಗ್ರಾಮ ಪಂಚಾಯ್ತಿ ನೂತನ ಉಪಾಧ್ಯಕ್ಷರಾಗಿ ಶ್ರೀಮತಿ ಗೀತಾ ಸಂಜೀವ ರೆಡ್ಡಿ ಅವರು ಮಂಗಳವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾ.ಪಂ ಇಓ ರಾಮಕೃಷ್ಣ ಅವರು ಚುನಾವಣಾಧಿಕಾರಿಯಾಗಿದ್ದರು.
ಟ್ಯಾರಿಫ್ ದರ ಏರಿಕೆಗೆ ಎಐಡಿವೈಒ ಖಂಡನೆ
ಮೊಬೈಲ್ ಟ್ಯಾರಿಫ್ ದರ ಏರಿಕೆಯನ್ನು ಖಂಡಿಸಿ ಆಲ್ ಇಂಡಿಯಾ ಯೂತ್ ಆರ್ಗನೈಸೇಷನ್ ನಗರದ ಗಾಂಧಿ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿತು.