ಕಳಪೆ ಬಿತ್ತನೆ ಬೀಜ ಮಾರಾಟದ ಮೇಲೆ ತೀವ್ರ ನಿಗಾ ವಹಿಸಿ, ಇಂತಹ ಪ್ರಕರಣಗಳು ಕಂಡುಬಂದರೆ ಕಠಿಣ ಕ್ರಮಕೈಗೊಳ್ಳಲು ಮುಂದಾಗುವಂತೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸೂಚಿಸಿದ್ದಾರೆ.
ಶಿಷ್ಯ ವೇತನ ಸರ್ಕಾರವೇ ಕೊಡಬೇಕು: ಎಸ್ಸೆಸ್
ವೈದ್ಯಕೀಯ ವಿದ್ಯಾರ್ಥಿಗಳಿಗೆ ಸರ್ಕಾರವೇ ಶಿಷ್ಯ ವೇತನ ನೀಡಬೇಕು, ನಮ್ಮಿಂದ ಕೊಡಲಾಗದು ಎಂದು ಜೆ.ಜೆ.ಎಂ. ವೈದ್ಯಕೀಯ ಕಾಲೇಜು ಆಡಳಿತ ಮಂಡಳಿ ಗೌರವ ಕಾರ್ಯದರ್ಶಿಗಳೂ ಆಗಿರುವ ಶಾಸಕ ಶಾಮನೂರು ಶಿವಶಂಕರಪ್ಪ ಸ್ಪಷ್ಟಪಡಿಸಿದ್ದಾರೆ.
ಶಿಷ್ಯ ವೇತನ ಸರ್ಕಾರವೇ ಕೊಡಬೇಕು: ಎಸ್ಸೆಸ್
ವೈದ್ಯಕೀಯ ವಿದ್ಯಾರ್ಥಿಗಳಿಗೆ ಸರ್ಕಾರವೇ ಶಿಷ್ಯ ವೇತನ ನೀಡಬೇಕು, ನಮ್ಮಿಂದ ಕೊಡಲಾಗದು ಎಂದು ಜೆ.ಜೆ.ಎಂ. ವೈದ್ಯಕೀಯ ಕಾಲೇಜು ಆಡಳಿತ ಮಂಡಳಿ ಗೌರವ ಕಾರ್ಯದರ್ಶಿಗಳೂ ಆಗಿರುವ ಶಾಸಕ ಶಾಮನೂರು ಶಿವಶಂಕರಪ್ಪ ಸ್ಪಷ್ಟಪಡಿಸಿದ್ದಾರೆ.
ಪಾಲಿಕೆ ವಿಪಕ್ಷ ಸದಸ್ಯರು ದಾರಿ ತಪ್ಪಿಸುತ್ತಿದ್ದಾರೆ
ಮಹಾನಗರ ಪಾಲಿಕೆಗೆ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ ಅನುದಾನ ವಿತರಣೆಯಲ್ಲಿ ತಾರತಮ್ಯವಾಗಿದೆ ಎಂಬ ಕಾಂಗ್ರೆಸ್ ಸದಸ್ಯರ ಹೇಳಿಕೆ ಸತ್ಯಕ್ಕೆ ದೂರವಾದದ್ದು. ಸುಳ್ಳು ಹೇಳಿಕೆ ಮೂಲಕ ವಿಪಕ್ಷ ನಾಯಕ ಎ.ನಾಗರಾಜ್ ಜನರ ದಾರಿ ತಪ್ಪಿಸುತ್ತಿದ್ದಾರೆ.
ಎಲ್ಲದಕ್ಕೂ ಮಳೆಯೇ ಮೂಲ ಅಲ್ಲವೇ ?.
ಆಗಸದ ತುಂಬಾ ತುಂಬಿರುವ ಮೋಡಗಳು ಮಳೆ ಸುರಿಸುವುದು ಮರೆಯುವುದಿಲ್ಲ ಎಂಬ ನಂಬಿಕೆಯೊಂದಿಗೆ ಹೊಲವನ್ನು ಅನ್ನದಾತ ಬೆಳೆಗೆ ಸಜ್ಜುಗೊಳಿಸುತ್ತಿದ್ದಾನೆ. ಆವರಗೆರೆ ಬಳಿ ಕಂಡು ಬಂದ ದೃಶ್ಯವಿದು.
ರಾಣೇಬೆನ್ನೂರು: ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ ; ಯುವಕರಿಬ್ಬರ ಸಾವು
ರಾಣೇಬೆನ್ನೂರು : ನಗರದ ಹೊರವಲಯದ ನೇಕಾರ ಬಡಾವಣೆ ಬಳಿ ನಿನ್ನೆ ತಡರಾತ್ರಿ ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿಯಾಗಿ ನಗರದ ನಂದನ ಶಿವಪ್ಪನವರ ಹಾಗೂ ವೈಭವ ಪಟ್ಟಣಶೆಟ್ಟಿ ಎನ್ನುವ ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಸಿಎಂ ಬದಲು : ಶಿವಗಂಗಾ ಹೇಳಿಕೆಗೆ ಕುರುಬರ ಸಂಘದ ಖಂಡನೆ
ಅಹಿಂದ ವರ್ಗದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಬದಲಾವಣೆ ಮಾಡಿದರೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು ಬದಲಾವಣೆ ಹೇಳಿಕೆ ನೀಡಿರುವ ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಅವರು ರಾಜೀನಾಮೆ ನೀಡಿ, ಧೈರ್ಯವಿದ್ದರೆ ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದು ಬರಲಿ
ಕನ್ನಡಿಗರಿಗೆ ಉದ್ಯೋಗ ಭದ್ರತೆಯ ಗ್ಯಾರಂಟಿ ಸಿಗಲಿ : ಮಧುಕುಮಾರ್
ಕರ್ನಾಟಕದಲ್ಲಿನ ಕೇಂದ್ರ- ರಾಜ್ಯ ಸರ್ಕಾರಿ ಇಲಾಖೆಗಳು ಹಾಗೂ ಖಾಸಗಿ ಒಡೆತನದ ಕಂಪನಿಗಳ ಎಲ್ಲಾ ಸ್ತರದ ಉದ್ಯೋಗಗಳಲ್ಲಿ ಕನ್ನಡಿಗರಿಗೇ ಸಿಂಹಪಾಲು ಸಿಗಬೇಕು.
ಹರಿಹರ ನಗರಸಭೆಯಲ್ಲೊಂದು ವರ್ಗಾವಣೆ ರಾದ್ಧಾಂತ
ಹರಿಹರ : ನಗರಸಭೆ ಕಿರಿಯ ಅಭಿಯಂತರರಾದ ಕೆ. ಮಂಜುಳಾ ಅವರಿಗೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ವರ್ಗಾವಣೆ ಆದೇಶ ನೀಡಲಾಗಿದ್ದರೂ ಸಹ ಇಲ್ಲಿನ ಪೌರಾಯುಕ್ತರು ರಿಲೀವ್ ಮಾಡದೇ ಇರುವ ಘಟನೆ ನಡೆದಿದೆ.
ನಗರದ `ಎಆರ್ಜಿ ವೈಭವ’ ದಲ್ಲಿ ಇಂದು ಆರೋಗ್ಯ ಪರಂಪರೆಯ ಆಹಾರ ಮೇಳ
ಎಆರ್ಜಿ ಕಲಾ ಮತ್ತು ವಾಣಿಜ್ಯ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದ ವತಿಯಿಂದ ಇಂದು ಬೆಳಿಗ್ಗೆ 11.30ಕ್ಕೆ ಕಾಲೇಜು ಆವರಣದಲ್ಲಿ `ಎಆರ್ಜಿ ವೈಭವ' ದಲ್ಲಿ ಆರೋಗ್ಯ ಪರಂಪರೆಯ ಆಹಾರ ಮೇಳ ಹಮ್ಮಿಕೊಳ್ಳಲಾಗಿದೆ.
ಐದೇ ದಿನದಲ್ಲಿ ಮುಗಿದ ಅಡಿಕೆ ವಿಮೆ ಕಂತು ಗಡುವು
ಜಿಲ್ಲೆಯಲ್ಲಿ 2024-25ರ ಸಾಲಿಗೆ ಅಡಿಕೆ ಬೆಳೆಗೆ ಸರ್ಕಾರದಿಂದ ವಿಮೆ ಪಡೆಯಲು ಕೇವಲ ಐದು ದಿನಗಳ ಕಾಲಾವಕಾಶ ನೀಡಲಾಗಿದೆ. ಜೂನ್ 27ರಿಂದ ವಿಮೆ ಕಂತು ಪಾವತಿಸಲು ಅವಕಾಶ ನೀಡಿದ್ದರೆ, ಜುಲೈ 1ರಂದೇ ಅವಧಿ ಮುಕ್ತಾಯಗೊಂಡಿದೆ.
ಗ್ರಾಮ ಪಂಚಾಯತಿ ಕಾರ್ಯದರ್ಶಿ ಈಗ ಉಪ ನೋಂದಣಾಧಿಕಾರಿ
ಜನನ, ಮರಣ ನೋಂದಣಿಗೆ ಸರ್ಕಾರದ ಆದೇಶ ದಂತೆ ಗ್ರಾಮ ಪಂಚಾಯತಿ ಕಾರ್ಯದರ್ಶಿಯನ್ನು ಜನನ, ಮರಣ ಉಪ ನೋಂದ ಣಾಧಿಕಾರಿಗಳಾಗಿ ನೇಮಕ ಮಾಡಿ ಆದೇಶಿಸಿದ್ದು, ಇಂದಿನಿಂದ ಗ್ರಾಮೀಣ ಪ್ರದೇಶದಲ್ಲಿ ಜನನ, ಮರಣಗಳ ನೋಂದಣಿಯನ್ನು ಗ್ರಾಮ ಪಂಚಾಯತಿಯಲ್ಲಿ ನೋಂದಣಿ ಮಾಡಲಾಗುತ್ತಿದೆ.
ಇಂದಿರಾ ಕ್ಯಾಂಟಿನ್ : ಅಭಿಪ್ರಾಯ ಸಂಗ್ರಹಿಸಿದ ಎಸಿ
ಮಲೇಬೆನ್ನೂರು : ಪಟ್ಟಣದ ಜಿಬಿಎಂ ಶಾಲೆಯ ಆವರಣದಲ್ಲಿ ಶಾಲಾ ಕೊಠಡಿಗಳನ್ನು ಒಡೆದು ಇಂದಿರಾ ಕ್ಯಾಂಟಿನ್ ನಿರ್ಮಾಣ ಮಾಡುವ ಸ್ಥಳಕ್ಕೆ ಸೋಮವಾರ ಉಪ ವಿಭಾಗಾಧಿಕಾರಿ ಶ್ರೀಮತಿ ಎನ್. ದುರ್ಗಾಶ್ರೀ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ನಗರದಲ್ಲಿ ಇಂದು ಫ.ಗು. ಹಳಕಟ್ಟಿ ಜನ್ಮದಿನ
ಜಿಲ್ಲಾಡಳಿತದ ವತಿಯಿಂದ ಇಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಡಾ.ಫಕ್ಕೀರಪ್ಪ ಗುರುಬಸಪ್ಪ ಹಳಕಟ್ಟಿಯವರ ಜನ್ಮದಿನ-ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಆಯೋಜಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ ತಿಳಿಸಿದ್ದಾರೆ.
ನಗರದಲ್ಲಿ ಇಂದು ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ
ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಹಾಗೂ ಜಿಲ್ಲಾ ಕದಳಿ ಮಹಿಳಾ ವೇದಿಕೆ ವತಿಯಿಂದ ಇಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಗುರು ಬಸವ ಮಂಟಪದಲ್ಲಿ ಡಾ.ಫ.ಗು. ಹಳಕಟ್ಟಿಯವರ ಜಯಂತಿ, ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಮತ್ತು ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕರಡು ಮತದಾರರ ಪಟ್ಟಿಗೆ ಆಕ್ಷೇಪಣೆ
ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಸಂಘದ 2024-29 ನೇ ಸಾಲಿಗೆ ಚುನಾವಣೆ ನಡೆಯಲಿದ್ದು, ದಾವಣಗೆರೆ ತಾಲ್ಲೂಕು ವ್ಯಾಪ್ತಿಗೆ ಸಂಬಂಧಿಸಿದಂತೆ ಎಲ್ಲಾ ಇಲಾಖೆಯ ನೌಕರರ ವಿವರ ಪಡೆದುಕೊಂಡು ಕರಡು ಮತದಾರರ ಪಟ್ಟಿ ತಯಾರಿಸಲಾಗಿದೆ.
ಸಂಚಾರಿ ನಿಯಮ ಉಲ್ಲಂಘನೆ ಬಾಕಿ ದಂಡ ಪಾವತಿಸಲು ಪೊಲೀಸ್ ಇಲಾಖೆ ಸೂಚನೆ
ಜಿಲ್ಲೆಯಲ್ಲಿ ಸಂಚಾರಿ ನಿಯಮ ಉಲ್ಲಂಘಿಸಿ ದಂಡ ಪಾವತಿಸದೇ ಬಾಕಿ ಉಳಿಸಿಕೊಂಡವರು ಜುಲೈ 15ರೊಳಗೆ ದಂಡ ಪಾವತಿಸುವಂತೆ ಎಸ್ಪಿ ಉಮಾ ಪ್ರಶಾಂತ್ ಸೂಚಿಸಿದ್ದಾರೆ.
ಮೋಟಾರ್ ರಿವೈಂಡಿಂಗ್ ತರಬೇತಿ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯಿಂದ ಇದೇ ದಿನಾಂಕ 10 ರಿಂದ 30 ದಿನಗಳ ಮೋಟಾರ್ ರಿವೈಂಡಿಂಗ್ ಉಚಿತ ತರಬೇತಿ ಆಯೋಜಿಸಲಾಗಿದ್ದು, ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬ ಹುದಾಗಿದೆ.
ಬಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ
ಕ್ಷತ್ರಿಯ ಮರಾಠ ವಿದ್ಯಾ ಮತ್ತು ಕಲ್ಯಾಣಾಭಿವೃದ್ಧಿ ಟ್ರಸ್ಟ್ ವತಿಯಿಂದ 2023-24ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ. 75 ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿ ಉತ್ತೀರ್ಣರಾದ ದಾವಣಗೆರೆ ನಗರ ವ್ಯಾಪ್ತಿಯಲ್ಲಿರುವ ಕ್ಷತ್ರಿಯ ಮರಾಠ ಸಮಾಜದ ಬಡ ವಿದ್ಯಾರ್ಥಿನಿಯರಿಗೆ ಪ್ರೋತ್ಸಾಹ ಧನ ನೀಡಲಾಗುವುದು
ಕಡ್ಲೇಬಾಳ್ನಲ್ಲಿ ಇಂದು
ದಾವಣಗೆರೆ ತಾಲ್ಲೂಕಿನ ಕಡ್ಲೇಬಾಳು ಗ್ರಾಮದ ಶ್ರೀ ಸದ್ಗುರು ಕೃಪಾ ಭವನ (ದೇವರಹಟ್ಟಿ)ದಲ್ಲಿ `ಸದ್ಗುರುತ್ರಯರ ಮೂರ್ತಿ ಪ್ರತಿಷ್ಠಾಪನೆ' ಹಾಗೂ `ಶ್ರೀ ಮಹಾ ರಾಜರ ದಿವ್ಯ ಸ್ಥಿರ ಪಾದುಕೆಗಳ ಪ್ರತಿಷ್ಠಾಪನಾ' ಕಾರ್ಯಕ್ರಮದ ಅಂಗವಾಗಿ ಇಂದು ಬೆಳಿಗ್ಗೆ 6ರಿಂದ ಭಜನೆ ಕಾರ್ಯಕ್ರಮ, 7 ನಡೆಯಲಿದೆ.
ಹಾಲಿನ ದರ ಹೆಚ್ಚಳ ವಿರೋಧಿಸಿ ನಗರದಲ್ಲಿ ಇಂದು ಬಿಜೆಪಿ ಪ್ರತಿಭಟನೆ
ಹಾಲಿನ ದರ ಹೆಚ್ಚಳ ವಿರೋಧಿಸಿ ನಾಳೆ ದಿನಾಂಕ 1 ರ ಸೋಮವಾರ ಬಿಜೆಪಿ ಜಿಲ್ಲಾ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್ ಹಾಗೂ ಜಿಲ್ಲಾ ವಕ್ತಾರ ಬಿ.ಎಂ. ಸತೀಶ್ ಕೊಳೇನಹಳ್ಳಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ವೆಂಕಟೇಶ್ ಬಾಬುಗೆ ಪಿಎಚ್ಡಿ ಪದವಿ
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಎಸ್. ವೆಂಕಟೇಶ್ ಬಾಬು ಅವರಿಗೆ ಮೈಸೂರು ವಿಶ್ವವಿದ್ಯಾಲಯವು ಪಿಎಚ್ಡಿ ಪದವಿ ನೀಡಿದೆ.
ಜೋಸ್ ಅವರಿಗೆ ಕರಾಟೆ ಮಾಸ್ಟರ್ ಪ್ರಶಸ್ತಿ
ರಾಜ್ಯ ಕರಾಟೆ ತೀರ್ಪುಗಾರರ ಆಯೋಗದ ಅಧ್ಯಕ್ಷ ಕೆ.ಪಿ. ಜೋಸ್ ಅವರು ದೇಶದ ಅತ್ಯುತ್ತಮ ಕರಾಟೆ ಮಾಸ್ಟರ್ ಪ್ರಶಸ್ತಿಯನ್ನು ಕೇರಳದಲ್ಲಿ ಪಡೆದಿದ್ದಾರೆ. ಇವರು ಕರಾಟೆಯಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ `ಇಂಟರ್ನ್ಯಾಷನಲ್ ಫೌಂಡೇಶನ್ ಆಫ್ ಎಂಪವರ್ ಮೆಂಟ್ ಸಂಸ್ಥೆಯು ಈ ಪ್ರಶಸ್ತಿ ನೀಡಿದೆ.
ಸಾಣೇಹಳ್ಳಿ : ಪುಸ್ತಕ ಬಿಡುಗಡೆ
ಶಿವನಕೆರೆ ಬಸವಲಿಂಗಪ್ಪ ಅವರ `ವಚನ ಧರ್ಮದಲ್ಲಿ ನಡೆ-ನುಡಿ ಸಿದ್ಧಾಂತ' ಎಂಬ ಪುಸಕ ಬಿಡುಗಡೆ ಸಮಾರಂಭ ಇಂದು ಬೆಳಿಗ್ಗೆ 10 ಗಂಟೆಗೆ ಸಾಣೇಹಳ್ಳಿಯ ಎಸ್.ಎಸ್. ರಂಗಮಂದಿರದಲ್ಲಿ ನೆರವೇರಲಿದೆ.
ಹೊನ್ನಾಳಿ : ಕಾಣೆಯಾದ ವ್ಯಕ್ತಿ ಶವವಾಗಿ ಪತ್ತೆ
ಹೊನ್ನಾಳಿ : ತಾಲ್ಲೂಕಿನ ಅರಕೆರೆ ಎ.ಕೆ.ಕಾಲೋನಿಯ ಹತ್ತಿರದ ಕಾಡಿನಂತಿರುವ ಪ್ರದೇಶದಲ್ಲಿ ಇಂದು ಸಂಜೆ ಮರಕ್ಕೆ ನೇಣು ಹಾಕಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿರುವ ಘಟನೆ ಹೊನ್ನಾಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದಲ್ಲಿ ಇಂದು ರಾಜ್ಯಮಟ್ಟದ ತಾಂತ್ರಿಕ ಮೇಳ
ಸುಕಲ್ಪ ಎನ್ನುವ ಎರಡು ದಿನಗಳ ರಾಜ್ಯ ಮಟ್ಟದ ತಾಂತ್ರಿಕ ಮೇಳವನ್ನು ನಗರದ ಜಿಎಂ ಯೂನಿವರ್ಸಿಟಿಯ ಇನ್ಫರ್ಮೇಷನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದಲ್ಲಿ ಆಯೋಜಿಸಲಾಗಿದೆ ಎಂದು ಐಎಸ್ಇ ಮುಖ್ಯಸ್ಥ ಹಾಗೂ ಸುಕಲ್ಪದ ಸಂಚಾಲಕ ಡಾ.ಟಿ.ಎಂ. ವೀರಗಂಗಾಧರ ಸ್ವಾಮಿ ತಿಳಿಸಿದರು.
ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ಆಗ್ರಹಿಸಿ ಇಂದು ನಗರದಲ್ಲಿ ಸತ್ಯಾಗ್ರಹ
ಸರೋಜಿನಿ ಮಹಿಷಿ ವರದಿ ಜಾರಿಗೆ ತರಬೇಕು. ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಜುಲೈ 1ರ ಸೋಮವಾರ ಬೆಳಗ್ಗೆ 11.30ರಿಂದ ಸಂಜೆ 5ರವರೆಗೆ ಮಹಾನಗರ ಪಾಲಿಕೆ ಕಚೇರಿ ಬಳಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು
ಸಾಲಕಟ್ಟೆಯಲ್ಲಿ ಇಂದು ಶಾಲಾ ಕೊಠಡಿ ಉದ್ಘಾಟನೆ
ಮಲೇಬೆನ್ನೂರು ಸಮೀಪದ ಸಾಲಕಟ್ಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಹೆಚ್ಚುವರಿ ಶಾಲಾ ಕೊಠಡಿಯನ್ನು ಇಂದು ಬೆಳಿಗ್ಗೆ 10.30ಕ್ಕೆ ಶಾಸಕ ಬಿ.ಪಿ.ಹರೀಶ್ ಉದ್ಘಾಟಿಸಲಿದ್ದಾರೆ.
ಕಕ್ಕರಗೊಳ್ಳದಲ್ಲಿ ಇಂದು ಎನ್ನೆಸ್ಸೆಸ್ ಶಿಬಿರ
ದಾವಣಗೆರೆಯ ಚಾಣಕ್ಯ ಪ್ರಥಮ ದರ್ಜೆ ವಾಣಿಜ್ಯ ಮಹಾವಿದ್ಯಾಲಯ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಕಕ್ಕರಗೊಳ್ಳ ಗ್ರಾಮದ ಸಮುದಾಯ ಭವನದಲ್ಲಿ ಎನ್ಎಸ್ಎಸ್ ಶಿಬಿರದ ಕಾರ್ಯಕ್ರಮಗಳು ನಡೆಯಲಿದೆ.
ಹೊಸ ಸಮಾಜ ನಿರ್ಮಾಣಕ್ಕಾಗಿ ಈಶ್ವರೀಯ ವಿವಿ ಸಂಕಲ್ಪ
ಮಲೇಬೆನ್ನೂರು : ಹೊಸ ಸಮಾಜ ನಿರ್ಮಾಣಕ್ಕಾಗಿ ಈಶ್ವರೀಯ ವಿಶ್ವವಿದ್ಯಾಲಯ ಕಾರ್ಯ ನಿರ್ವಹಿಸುತ್ತಿದ್ದು, ಅಧ್ಯಾತ್ಮಿಕ ಹಾಗೂ ನೈತಿಕ ಶಿಕ್ಷಣದ ಮೂಲಕ ಜನರಲ್ಲಿ ಬದಲಾ ವಣೆಗೆ ಪ್ರಯತ್ನಿಸುತ್ತಿದೆ
ನವಚೇತನ ಕಿಡ್ಸ್ನಲ್ಲಿ ಕಾಂಪೋಸ್ಟ್ ಗೊಬ್ಬರ ತಯಾರಿಸುವ ಕಾರ್ಯಾಗಾರ
ನಗರದ ಶಿವಕುಮಾರ ಸ್ವಾಮಿ ಬಡಾವಣೆಯ ನವಚೇತನ ಕಿಡ್ಸ್ ಪ್ಲೇ ಹೋಂನಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಅಡುಗೆ ಮನೆಯ ಹಸಿ ತ್ಯಾಜ್ಯವನ್ನು ಕಾಂಪೋಸ್ಟ್ ಗೊಬ್ಬರವನ್ನಾಗಿ ಪರಿವರ್ತಿಸುವ ಕಾರ್ಯಾಗಾರವನ್ನು ನಡೆಸಲಾಯಿತು.
ಜಗಳೂರು : ಅಣಬೂರಿನ ಜಯಣ್ಣ ನಿವೃತ್ತಿ
ಜಗಳೂರು : ಸುದೀರ್ಘ ಕಾಲ ಸೇವೆ ಸಲ್ಲಿಸಿ, ನಿವೃತ್ತಿಯಾಗುತ್ತಿರುವ ಎ.ಎಂ.ಜಯ್ಯಣ್ಣ ಅವರ ಮುಂದಿನ ಜೀವನ ಸುಖವಾಗಿರಲಿ ಎಂದು ಜ್ಞಾನ ವಿಕಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಮನೋಹರ್ ರೆಡ್ಡಿ ಹೇಳಿದರು.
ಕೆ.ಎನ್.ಹಳ್ಳಿ ಗ್ರಾ.ಪಂ ಅಧ್ಯಕ್ಷರಾಗಿ ಗಿರಿಜಮ್ಮ
ಮಲೇಬೆನ್ನೂರು : ಕೆ.ಎನ್.ಹಳ್ಳಿ ಗ್ರಾಮ ಪಂಚಾಯ್ತಿ ನೂತನ ಅಧ್ಯಕ್ಷರಾಗಿ ಶ್ರೀಮತಿ ಗಿರಿಜಮ್ಮ ಕರಿಯಪ್ಪ ಅವರು ಮಂಗಳವಾರ ನಡೆದ ಚುನಾವಣೆಯಲ್ಲಿ ಆವಿರೋಧವಾಗಿ ಆಯ್ಕೆಯಾಗಿದ್ದಾರೆ. ಶ್ರೀಮತಿ ಮಂಜಮ್ಮ ಶೇಖರಪ್ಪ ಅವರ ರಾಜೀನಾಮೆಯಿಂದಾಗಿ ಅಧ್ಯಕ್ಷ ಸ್ಥಾನ ತೆರವಾಗಿತ್ತು.
ಉಕ್ಕಡಗಾತ್ರಿ ಗ್ರಾ.ಪಂ. ಉಪಾಧ್ಯಕ್ಷರಾಗಿ ಗೀತಾ ಸಂಜೀವ ರೆಡ್ಡಿ
ಮಲೇಬೆನ್ನೂರು : ಉಕ್ಕಡಗಾತ್ರಿ ಗ್ರಾಮ ಪಂಚಾಯ್ತಿ ನೂತನ ಉಪಾಧ್ಯಕ್ಷರಾಗಿ ಶ್ರೀಮತಿ ಗೀತಾ ಸಂಜೀವ ರೆಡ್ಡಿ ಅವರು ಮಂಗಳವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾ.ಪಂ ಇಓ ರಾಮಕೃಷ್ಣ ಅವರು ಚುನಾವಣಾಧಿಕಾರಿಯಾಗಿದ್ದರು.
ಟ್ಯಾರಿಫ್ ದರ ಏರಿಕೆಗೆ ಎಐಡಿವೈಒ ಖಂಡನೆ
ಮೊಬೈಲ್ ಟ್ಯಾರಿಫ್ ದರ ಏರಿಕೆಯನ್ನು ಖಂಡಿಸಿ ಆಲ್ ಇಂಡಿಯಾ ಯೂತ್ ಆರ್ಗನೈಸೇಷನ್ ನಗರದ ಗಾಂಧಿ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿತು.
ಊರಿನ ಸ್ವಚ್ಛತೆಯಲ್ಲಿ ಹರಿಹರ ನಗರಸಭೆ ವಿಫಲ
800 ವರ್ಷಗಳ ಇತಿಹಾಸ ಹೊಂದಿದ ಊರೇ ಹರಿಹರ. ಇಂತಹ ಐತಿಹಾಸಿಕ ನಗರ ಸ್ವಚ್ಛತೆಯಲ್ಲಿ ಎಡವಿದೆ. ಎಲ್ಲೆಂದರಲ್ಲಿ ಕಸದ ರಾಶಿ ಮತ್ತು ಹೂಳು ತುಂಬಿದ ಚರಂಡಿಗಳು, ಊರಿನ ಎಲ್ಲ ಬಡಾವಣೆಯಲ್ಲೂ ಕಾಣುತ್ತಿವೆ.
ಪರಿಸರ ಸಂರಕ್ಷಣೆ ಎಲ್ಲರ ಹೊಣೆ : ನ್ಯಾ.ಮಹಾವೀರ ಕರೆಣ್ಣವರ್
ಮಾನವರಾಗಿ ನಾವು ಮಾಡಬಹುದಾದ ಅತ್ಯುತ್ತಮ ಕೆಲಸವೆಂದರೆ ಸುತ್ತಮುತ್ತಲಿನ ಪರಿಸರವನ್ನು ಸಂರಕ್ಷಿಸಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರೂ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ್ ತಿಳಿಸಿದರು.
ಹೊನ್ನೂರು ಗೊಲ್ಲರಹಟ್ಟಿ ವಾಸವಿ ವಿದ್ಯಾಲಯದಲ್ಲಿ ಅಕ್ಷರಾಭ್ಯಾಸ
ಹೊನ್ನೂರು ಗೊಲ್ಲರಹಟ್ಟಿ ಬಳಿಯ ಶ್ರೀ ವಾಸವಿ ರಾಷ್ಟ್ರೀಯ ವಿದ್ಯಾಲಯದಲ್ಲಿ ಅಕ್ಷರ ಎಂದರೆ ನಾಶವಿಲ್ಲದ್ದು ಎಂಬಂತೆ ಅಕ್ಷರಾಭ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಹರಿಹರದಲ್ಲಿ ಹಳಕಟ್ಟಿ ಜನ್ಮ ದಿನಾಚರಣೆ
ಹರಿಹರ : ನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಶರಣರ ವಚನಗಳನ್ನು ಸಂಗ್ರಹಿಸುವಲ್ಲಿ ಅಪಾರವಾಗಿ ಶ್ರಮಿಸಿರುವ ಸಾಹಿತಿ ಡಾ. ಫ.ಗು. ಹಳಕಟ್ಟೆಯವರ ಜನ್ಮ ದಿನ ಮತ್ತು ಸಾಹಿತ್ಯ ಸಂರಕ್ಷಣಾ ದಿನಾಚರಣೆ ಆಚರಿಸಲಾಯಿತು.
ಮೆಕ್ಕೆಜೋಳಕ್ಕೆ ಸೈನಿಕ ಹುಳುವಿನ ಬಾಧೆ; ಹತೋಟಿ ಕ್ರಮಗಳು
ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದ್ದರಿಂದ ತಾಲ್ಲೂಕಿನಾದ್ಯಂತ ರೈತರು ಮೆಕ್ಕೆಜೋಳ ಬಿತ್ತನೆ ಮಾಡಿದ್ದು, ಬಿತ್ತನೆಯಿಂದ ಹಿಡಿದು 15 ರಿಂದ 20 ದಿನದ ಮೆಕ್ಕೆಜೋಳ ಬೆಳೆಯನ್ನು ಕಾಣಬಹುದಾಗಿದೆ.
ಮೂಢನಂಬಿಕೆ ವಿರುದ್ಧ ಧ್ವನಿ ಎತ್ತಿದ ನಾಯಕ ಬಸವಣ್ಣ
ಅನ್ಯಾಯ, ಶೋಷಣೆ ಮತ್ತು ಮೂಢನಂಬಿಕೆ ವಿರುದ್ಧ ಧ್ವನಿ ಎತ್ತಿದ ಬಸವಣ್ಣ ಸಾವಿರಾರು ವೇಶ್ಯೆಯರನ್ನು ಶರಣೆಯರ ನ್ನಾಗಿಸಿ ಸಮಾಜವನ್ನು ಪರಿವರ್ತನೆ ಗೊಳಿಸಿದ್ದಾರೆ ಎಂದು ಕಸಾಪ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಬಿ.ಎ. ವಿಶ್ವೇಶ್ವರಯ್ಯ ತಿಳಿಸಿದರು.
ಎಚ್. ದಾಸಪ್ಪ ಸೇವಾ ನಿವೃತ್ತಿ : ಸನ್ಮಾನ
ಜಿಲ್ಲಾ ಸತ್ರ ನ್ಯಾಯಾಲಯ ಹಾಗೂ ಹರಿಹರದ ನ್ಯಾಯಾಲಯದಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ 23 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಎಚ್. ದಾಸಪ್ಪ ಅವರನ್ನು ಅವರ ನಿವಾಸದಲ್ಲಿ ಜಿಲ್ಲಾ ಸರ್ಕಾರಿ ನೌಕರರ ಕಬಡ್ಡಿ ತಂಡದ ವತಿಯಿಂದ ಸನ್ಮಾನಿಸಲಾಯಿತು.
ರೆಡ್ಕ್ರಾಸ್ ಸಂಸ್ಥೆಯ ಎನ್.ಜಿ. ಶಿವಕುಮಾರ್ಗೆ ಪ್ರಶಸ್ತಿ
ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ರಕ್ತ ನಿಧಿ ಕೇಂದ್ರದಲ್ಲಿ ಜಿಲ್ಲಾ ಆಪ್ತಸಮಾಲೋಚಕ ಮತ್ತು ಸಂಯೋಜಕರಾಗಿರುವ ಮೂಲತಃ ಹರಿಹರ ತಾಲ್ಲೂಕು ಬೆಳ್ಳೂಡಿ ಗ್ರಾಮದವರಾದ ಎನ್.ಜಿ. ಶಿವಕುಮಾರ್ ಅವರಿಗೆ `ನ್ಯಾಷನಲ್ ಸೋಶಿಯಲ್ ಡೆವಲಪ್ ಮೆಂಟ್' ಪ್ರಶಸ್ತಿ ಲಭಿಸಿದೆ.
ವಿಜಯನಗರ ಬಡಾವಣೆಯಲ್ಲಿ ಸಿಮೆಂಟ್ ರಸ್ತೆ ಕಾಮಗಾರಿಗೆ ಭೂಮಿ ಪೂಜೆ
ನಗರದ ಆರ್ಟಿಓ ಆಫೀಸ್ ಹತ್ತಿರವಿರುವ ರಿಂಗ್ ರಸ್ತೆಗೆ ಹೊಂದಿಕೊಂಡಿರುವ ವಿಜಯನಗರ ಬಡಾವಣೆ 3ನೇ ಕ್ರಾಸ್ನಲ್ಲಿ ಮಹಾನಗರ ಪಾಲಿಕೆ ವತಿಯಿಂದ ತೆರಿಗೆ, ಹಣಕಾಸು, ಅಪೀಲು, ಸ್ಥಾಯಿ ಸಮಿತಿ ಅಧ್ಯಕ್ಷರು ಹಾಗೂ ಪಾಲಿಕೆ ಸದಸ್ಯರಾದ ಹೆಚ್.ಉದಯಕುಮಾರ್ ಅವರು ಸಿಮೆಂಟ್ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
ಆನೆಕೊಂಡ ಪ್ರಾ.ಕೃ.ಪ. ಸಹಕಾರ ಸಂಘದ ಅಧ್ಯಕ್ಷರಾಗಿ ಕೊಟ್ರಯ್ಯ ಆಯ್ಕೆ
ಸಮೀಪದ ಆನೆಕೊಂಡ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಕೊಟ್ರಯ್ಯ ಬಿನ್ ಶರಣಯ್ಯ, ಬಸಾಪುರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕುಂದುವಾಡ ಯೋಧಾಸ್ – ಅಪ್ಪು ಫೈಟರ್ಸ್ ತಂಡಗಳಿಗೆ ಗೋಲ್ಡನ್ ಕೆಪಿಎಲ್ ಸಮಬಲ ಪ್ರಶಸ್ತಿ
ನಗರದ ಹಳೇ ಕುಂದುವಾಡದಲ್ಲಿ ಮನಾ ಯುವ ಬ್ರಿಗೇಡ್ ಮತ್ತು ಜರವೇ ಯಿಂದ ಅದ್ದೂರಿಯಾಗಿ ನಡೆಸಲಾಗಿದ್ದ ಗೋಲ್ಡನ್ ಕೆಪಿಎಲ್ -6 ಪಂದ್ಯಾವಳಿಗೆ ತೆರೆ ಬಿದ್ದಿದ್ದು, ಡ್ರಾನಲ್ಲಿ ಅಂತ್ಯಗೊಂಡಿತು.
ಸರ್ಕಾರಿ ಆದರ್ಶ ವಿದ್ಯಾಲಯಕ್ಕೆ ದಿಢೀರ್ ಭೇಟಿ ನೀಡಿದ ಶಾಸಕಿ ಲತಾ ಮಲ್ಲಿಕಾರ್ಜುನ್
ಹರಪನಹಳ್ಳಿ : ತಾಲ್ಲೂಕಿನ ತೆಲಿಗಿ ಗ್ರಾಮಕ್ಕೆ ತೆರಳುತ್ತಿದ್ದ ಶಾಸಕಿ ಲತಾ ಮಲ್ಲಿಕಾರ್ಜುನ್ ಅವರು, ಅನಂತನಹಳ್ಳಿ ಬಳಿ ಇರುವ ಸರ್ಕಾರಿ ಆದರ್ಶ ವಿದ್ಯಾಲಯಕ್ಕೆ ದಿಢೀರ್ ಭೇಟಿ ನೀಡಿದರು.
ಶರಣ ಸಂಸ್ಕೃತಿ ಮರೆಯುತ್ತಿರುವ ಯುವ ಸಮೂಹ
ಜಾಗತೀಕರಣದ ಭರಾಟೆಯಲ್ಲಿ ಸ್ಥಳೀಯ ಸಂಸ್ಕೃತಿ ಕ್ಷೀಣಿಸುತ್ತಿದ್ದು, ಶರಣ ಸಂಸ್ಕೃತಿಯನ್ನು ಯುವ ಸಮೂಹ ಮರೆಯುತ್ತಿದೆ. ಮಕ್ಕಳಿಗೆ ಆಸ್ತಿ ಮಾಡುವ, ಹಣ ಠೇವಣಿ ಇಡುವ ಅಗತ್ಯವಿಲ್ಲ. ಬದಲಾಗಿ ವಚನಗಳ ಅರಿವು ಮೂಡಿಸಿದರೆ ಸದ್ಗುಣಗಳ ಬೀಜ ಬಿತ್ತಿದಂತಾಗುತ್ತದೆ
ಆಹಾರ ಸಂಸ್ಕರಣೆಯಿಂದ ಕೃಷಿಗಿಂತ ಹೆಚ್ಚು ಉದ್ಯೋಗ ಸೃಷ್ಟಿ
ರಾಣೇಬೆನ್ನೂರು : ಕೃಷಿ ನಂತರ ಹೆಚ್ಚು ಉದ್ಯೋಗ ಸೃಷ್ಟಿಸುವ ಸಂಸ್ಕರಿಸಿದ ಆಹಾರ ಪದಾರ್ಥಗಳ ತಯಾರಿಕಾ ಸಹಕಾರಿ ಸಂಘಗಳಿಗೆ ಅವಶ್ಯವಿರುವ ಮೂಲಭೂತ ಸೌಕರ್ಯ ಕೊಡಿಸಲು ಸರ್ಕಾರದ ಮೇಲೆ ಒತ್ತಡ ತರುವುದಾಗಿ ಉಪಸಭಾಪತಿ ರುದ್ರಪ್ಪ ಲಮಾಣಿ ಹೇಳಿದರು.
ದೈಹಿಕ ವ್ಯಾಯಾಮವಾಗುವ ಕ್ರೀಡೆಯಲ್ಲಿ ಆಸಕ್ತಿ ಇರಲಿ
ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಕ್ರೀಡೆ ಬಹಳ ಮುಖ್ಯ. ಆದ್ದರಿಂದ ವಿದ್ಯಾರ್ಥಿಗಳು ಮೊಬೈಲ್ ಗೇಮ್ ಆಡುವುದ ಕ್ಕಿಂತ ದೈಹಿಕ ವ್ಯಾಯಾಮವಾಗುವ ಕ್ರೀಡೆಗಳಲ್ಲಿ ಹೆಚ್ಚಿನ ಆಸಕ್ತಿ ತೋರಬೇಕು ಎಂದು ಕಾಂಗ್ರೆಸ್ ಯುವ ಮುಖಂಡ ಶಿವರತನ್ ಹೇಳಿದರು.
ಐಸಿಸ್ ವಿರುದ್ಧದ ಹೋರಾಟಕ್ಕೆ ಆಫ್ರಿಕಾ ಹೊಸ ರಣರಂಗ
ದಶಕದ ಹಿಂದೆ ಇರಾಕ್ ಹಾಗೂ ಸಿರಿಯಾದಲ್ಲಿ ಖಿಲಾಫತ್ ಘೋಷಿಸಿದ್ದ ಐಸಿಸ್ ಉಗ್ರವಾದಿ ಸಂಘಟನೆ, ತನ್ನ ಸಾಕಷ್ಟು ಪ್ರಾಂತ್ಯಗಳನ್ನು ಕಳೆದುಕೊಂಡಿತ್ತು. ಆದರೆ, ಆಫ್ರಿಕಾದಲ್ಲಿ ತನ್ನ ಪ್ರಭಾವ ಹಾಗೂ ಬೆದರಿಕೆ ಮುಂದುವರೆಸಿದೆ.
ನೆಲ ಮೂಲದ ಸಂಸ್ಕೃತಿ ಜೀವನಕ್ಕೆ ಹಲವು ಸಂದೇಶ ನೀಡುವ ಚಿತ್ರ `ದೇಸಾಯಿ’
ಈ ವಾರ ರಾಜ್ಯದಾದ್ಯಂತ ಬಿಡುಗಡೆಯಾಗಿ ಸಂಭ್ರಮದಿಂದ ಮುನ್ನುಗ್ಗುತ್ತಿರುವ ಕನ್ನಡ ಚಲನಚಿತ್ರ ದೇಸಾಯಿ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2ನೇ ಶಾಖೆ ಆರಂಭಿಸಲು ಆಗ್ರಹ
ಹರಿಹರ : ನಗರದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) 2ನೇ ಶಾಖೆ ಆರಂಭಿಸಲು ಆಗ್ರಹಿಸಿ, ಬ್ಯಾಂಕ್ ಗ್ರಾಹಕರ ಹಿತ ರಕ್ಷಣಾ ಸಮಿತಿಯಿಂದ ಶುಕ್ರವಾರ ತಹಶೀಲ್ದಾರ್ ಗುರುಬಸವರಾಜ್ ಇವರಿಗೆ ಮನವಿ ನೀಡಲಾಯಿತು.
ಸರ್ಕಾರಿ ಶಾಲೆಗಳಲ್ಲಿ ಅಂಗನವಾಡಿ ಕಟ್ಟಡ ನಿರ್ಮಿಸಿದರೆ ಎರಡು ಇಲಾಖೆಗೂ ಅನುಕೂಲ: ಜಿಲ್ಲಾಧಿಕಾರಿ ವೆಂಕಟೇಶ್
ಸರ್ಕಾರಿ ಶಾಲಾ ಆವರಣದಲ್ಲಿ ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸುವುದರಿಂದ ಎರಡೂ ಇಲಾಖೆಗೂ ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ. ತಿಳಿಸಿದರು.
ಮಲೇಬೆನ್ನೂರು ಪುರಸಭೆಗೆ ಐವರು ನಾಮ ನಿರ್ದೇಶನ
ಮಲೇಬೆನ್ನೂರು : ಪಟ್ಟಣದ ಪುರಸಭೆಗೆ ಕಾಂಗ್ರೆಸ್ ಕಾರ್ಯಕರ್ತರಾದ ಬಿ. ವೀರಯ್ಯ, ಎ. ಆರಿಫ್ ಅಲಿ, ಬುಡ್ಡವರ್ ರಫೀಕ್ ಸಾಬ್, ಎಕ್ಕೆಗೊಂದಿ ಕರಿಯಪ್ಪ ಮತ್ತು ದೊಡ್ಡಮನಿ ಬಸವರಾಜ್ ಅವರನ್ನು ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ಹಾಸ್ಟೆಲ್ ಸೌಲಭ್ಯ : ಎಐಎಸ್ಎಫ್ ಪ್ರತಿಭಟನೆ
ಹರಪನಹಳ್ಳಿ : ತಾಲ್ಲೂಕಿನ ಎಸ್ಸಿ ಎಸ್ಟಿ ಹಾಗೂ ಬಿಸಿಎಂ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ಸೌಲಭ್ಯ ಮತ್ತು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿ, ನೀಟ್ ಪರೀಕ್ಷಾ ಅಕ್ರಮ ಖಂಡಿಸಿ, ಎ.ಐ.ಎಸ್.ಎಫ್ ತಾಲ್ಲೂಕು ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.