ಭಗತ್ ಸಿಂಗ್ ನಗರದ ಅಂಜುಮನ್ ಶಾಲೆ ಬಳಿ ಬುಧವಾರ ರಾತ್ರಿ 11.15ರ ವೇಳೆ ವ್ಯಕ್ತಿಯೊಬ್ಬರ ಸುಲಿಗೆ ನಡೆದಿದ್ದು, ತಲೆ ಮೇಲೆ ಕಲ್ಲು ಹಾಕಿ ಕೊಲೆಗೂ ಯತ್ನಿಸಲಾಗಿದೆ. ಈ ಕುರಿತು ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಜಿಲ್ಲೆಯಲ್ಲಿ ವಾಡಿಕೆಗಿಂತ 41 ಮಿ.ಮೀ. ಹೆಚ್ಚು ಮಳೆ
ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರಿ ನಲ್ಲಿ ವಾಡಿಕೆಗಿಂತ 41 ಮಿ.ಮೀ ಹೆಚ್ಚು ಮಳೆಯಾಗಿದೆ.
ಕರಾಟೆಯಲ್ಲಿ ಸಾದತ್ಗೆ ಬಂಗಾರ
ನಗರದಲ್ಲಿ ಈಚೆಗೆ ನಡೆದ ರಾಷ್ಟ್ರೀಯ ಮುಕ್ತ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆಯಲ್ಲಿ ಇಲ್ಲಿನ ಚಾಣಕ್ಯ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿ ಸಾದತ್ ಮಹಮ್ಮದ್ ಅವರು ಕಾಟಾ ಮತ್ತು ಕುಮುಟೆ ಈ ಎರಡು ವಿಭಾಗದಲ್ಲಿ ಭಾಗವಹಿಸಿ ಬಂಗಾರದ ಪದಕ ಕೊರಳಿಗೇರಿಸಿಕೊಂಡಿದ್ದಾರೆ.
ಹರಿಹರ : 29 ರಂದು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಆಡಿ ಕೃತಿಕ ಪೂಜೆ
ಹರಿಹರ : ನಗರದ ಹೊಸಭರಂಪುರ ಬಡಾವಣೆಯ ನೂರ ಎಂಟು ಲಿಂಗೇಶ್ವರ ದೇವಸ್ಥಾನ ಹಿಂಬದಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇದೇ ದಿನಾಂಕ 29 ರ ಸೋಮವಾರ ಶ್ರೀ ಸುಬ್ರಹ್ಮಣ್ಯ ಸ್ವಾಮಿಗೆ ಆಡಿ ಕೃತ್ತಿಕ ಪೂಜೆ ನಡೆಯಲಿದೆ.
ಹರಿಹರದಲ್ಲಿ ಹಡಪದ ಅಪ್ಪಣ್ಣ ಜಯಂತಿ
ಹರಿಹರ : ನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ದಾರ್ಶನಿಕ ಹಡಪದ ಅಪ್ಪಣ್ಣ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಕೃಷಿಯಲ್ಲಿ ನೀರಿನ ವೈಜ್ಞಾನಿಕ ಬಳಕೆಗೆ ಸರ್ಕಾರ ಚಿಂತಿಸಲಿ : ಎಎಪಿ
ಕೃಷಿಯಲ್ಲಿ ನೀರನ್ನು ವೈಜ್ಞಾನಿಕವಾಗಿ ಹೇಗೆ ಬಳಸಿಕೊಳ್ಳಬೇಕು ಎಂಬುದರ ಬಗ್ಗೆ ಸರ್ಕಾರ ಚಿಂತನೆ ನಡೆಸಲಿ ಹಾಗೂ ಈ ಬಗ್ಗೆ ರೈತರಲ್ಲಿ ಅರಿವು ಮೂಡಿಸಲು ಮುಂದಾಗಲಿ ಎಂದು ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಕೆ.ಎಸ್. ಶಿವಕುಮಾರಪ್ಪ ಒತ್ತಾಯಿಸಿದ್ದಾರೆ.
ಮಲೇಬೆನ್ನೂರಿನಲ್ಲಿ ಹಸು ಕಳ್ಳನ ಬಂಧನ
ಮಲೇಬೆನ್ನೂರು : ಹಸು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಮಲೇಬೆನ್ನೂರು ಪೊಲೀಸರು ಬಂಧಿಸಿದ್ದಾರೆ.
ನಾಳೆ ಆರೂಢ ದಾಸೋಹಿ ಮಾಗನೂರು ಬಸಪ್ಪ ಪ್ರಶಸ್ತಿ ಪ್ರದಾನ
ಶರಣ ಮಾಗನೂರು ಬಸಪ್ಪ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನಾಡಿದ್ದು ದಿನಾಂಕ 27ರಂದು ಬೀದರ್ನ ಡಾ.ಚನ್ನಬಸವ ಪಟ್ಟದೇವರ ರಂಗ ಮಂದಿರ ಹಾಗೂ ಬರುವ ಆಗಸ್ಟ್ 3ರಂದು ದಾವಣಗೆರೆ ಕುವೆಂಪು ಕನ್ನಡ ಭವನದಲ್ಲಿ ಹಮ್ಮಿ ಕೊಳ್ಳಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ಹೇಳಿದರು.
ನಗರದಲ್ಲಿ ನಾಳೆ ಸಂಗೀತ, ನೃತ್ಯ, ತಾಳವಾದ್ಯದ ಲಿಖಿತ ಪರೀಕ್ಷೆ
ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ 2024ನೇ ಸಾಲಿನ ವಿಶೇಷ ಸಂಗೀತ, ನೃತ್ಯ ಹಾಗೂ ತಾಳವಾದ್ಯ ಲಿಖಿತ ಪರೀಕ್ಷೆಗಳು ನಾಡಿದ್ದು ದಿನಾಂಕ 27 ಮತ್ತು 28ರಂದು ನಡೆಯಲಿವೆ
ಅನ್ಮೋಲ್ನಲ್ಲಿ ಇಂದು ಉಪನ್ಯಾಸ
ಕರ್ನಾಟಕ ಸಾಹಿತ್ಯ ಅಕಾಡೆಮಿ, ಜೆ.ಹೆಚ್. ಪಟೇಲ್ ಫೌಂಡೇಷನ್, ಕರುಣಾ ಜೀವ ಕಲ್ಯಾಣ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮವನ್ನು ಶಿರಮಗೊಂಡನ ಹಳ್ಳಿಯ ಅನ್ಮೋಲ್ ಪಬ್ಲಿಕ್ ಸ್ಕೂಲ್ ಅಂಡ್ ಕಾಲೇಜಿನಲ್ಲಿ ಇಂದು ಬೆಳಿಗ್ಗೆ 11 ಕ್ಕೆ ಏರ್ಪಡಿಸಲಾಗಿದೆ.
ಸಿದ್ಧಗಂಗಾ ಶಾಲೆಯಲ್ಲಿ ಇಂದು ಉಪನ್ಯಾಸ
ಸಿದ್ಧಗಂಗಾ ವಿದ್ಯಾಸಂಸ್ಥೆಯಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ, ಜೆ.ಹೆಚ್. ಪಟೇಲ್ ಫೌಂಡೇ ಷನ್, ಕರುಣಾ ಜೀವ ಕಲ್ಯಾಣ ಟ್ರಸ್ಟ್ ಸಂಯುಕ್ತಾ ಶ್ರಯದಲ್ಲಿ ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯಲ್ಲಿ ಇಂದು ಬೆಳಿಗ್ಗೆ 11 ಕ್ಕೆ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಹಾವೇರಿ ಶರಣ ಕಮ್ಮಟದಲ್ಲಿ ಚಿತ್ರಕಿ ಗಾಯನ
ಹಾವೇರಿಯ ಶಿವಬಸವ ಕಲ್ಯಾಣ ಮಂಟಪದಲ್ಲಿ ಈಚೆಗೆ ನಡೆದ 18ನೇ ಶರಣ ಕಮ್ಮಟದಲ್ಲಿ ಹಾಗೂ ಜಯದೇವಪುರದಲ್ಲಿ ನಡೆದ ಜಯವಿಭವ ಸ್ವಾಮಿಗಳ ಸಂಸ್ಮರಣೆ ಕಾರ್ಯಕ್ರಮದಲ್ಲಿ ಚಿತ್ರಿಕಿ ಶಿವಕುಮಾರ್ ಅವರು ಬಸವಣ್ಣನವರ ವಚನ ಹಾಗೂ ಪಂಚಾಕ್ಷರಿ ಗವಾಯಿಗಳವರ ವಚನ ಹಾಡಿದರು.
ನಗರದಲ್ಲಿ ಇಂದು ಪ್ರತಿಭಾ ಪುರಸ್ಕಾರ
ಎಆರ್ಜಿ ಕಲಾ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಬೆಳಗ್ಗೆ 11ಕ್ಕೆ ಸಾಂಸ್ಕೃತಿಕ ಕ್ರೀಡಾ, ಎನ್ಎಸ್ಎಸ್, ಎನ್ಸಿಸಿ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ.
ನಿಟುವಳ್ಳಿಯಲ್ಲಿ ಇಂದು ಅಜ್ಜಿ ಹಬ್ಬ
ಆಷಾಢ ಮಾಸದ ಕಡೇ ಶುಕ್ರವಾರವಾದ ಇಂದು ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನದ ಟ್ರಸ್ಟ್ ಹಾಗೂ ಗ್ರಾಮದ ವತಿಯಿಂದ ಅಜ್ಜಿ ಹಬ್ಬವನ್ನು ಏರ್ಪಡಿಸಲಾಗಿದೆ. ಮನೆಯಲ್ಲಿ ಪೂಜೆ ಮಾಡಿದ (ಅಜ್ಜಿ, ಅಮ್ಮ) ಅಜ್ಜಿ ಕುಡಿಕೆಯನ್ನು ರಾತ್ರಿ 9 ರೊಳಗೆ ಕಳುಹಿಸಬೇಕೆಂದು ಟ್ರಸ್ಟಿನ ಅಧ್ಯಕ್ಷ ಹೆಚ್.ಬಿ.ಮಂಜುನಾಥ್ ಅವರು ತಿಳಿಸಿದ್ದಾರೆ.
ನಗರದಲ್ಲಿ ಇಂದು ಪಿಜಿಸಿಇಟಿ ಕಾರ್ಯಾಗಾರ
ಜೈನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಂಬಿಎ ವಿಭಾಗದಲ್ಲಿ ಪಿಜಿಸಿಇಟಿ ಉಚಿತ ಕಾರ್ಯಾಗಾರ ಇಂದು ಮತ್ತು ನಾಳೆ ನಡೆಯಲಿದೆ.
ರೈತರ ನಿರೀಕ್ಷೆ ಹುಸಿಗೊಳಿಸಿದ ಬಜೆಟ್ : ಬಲ್ಲೂರು ರವಿಕುಮಾರ್
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ರೈತರ ನಿರೀಕ್ಷೆಗಳನ್ನು ಹುಸಿಗೊಳಿಸಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ಬಲ್ಲೂರು ರವಿಕುಮಾರ್ ಟೀಕಿಸಿದ್ದಾರೆ.
ಖಾಲಿ ನಿವೇಶನದಲ್ಲಿನ ಗಿಡ-ಗಂಟಿ ತೆರವಿಗೆ ಹೊನ್ನಾಳಿ ಪುರಸಭೆ ಮುಖ್ಯಾಧಿಕಾರಿ ಸೂಚನೆ
ಹೊನ್ನಾಳಿ : ಪುರಸಭೆ ವ್ಯಾಪ್ತಿಯ ಖಾಲಿ ನಿವೇಶನದಲ್ಲಿ ಅನಗತ್ಯವಾಗಿ ಬೆಳದಿರುವ ಗಿಡ-ಗಂಟಿಗಳು ಮತ್ತು ಜಾಲಿಗಿಡಗಳನ್ನು ತೆರವುಗೊಳಿಸುವಂತೆ ನಿವೇಶನಗಳ ಮಾಲೀಕರಿಗೆ ಪುರಸಭೆ ಮುಖ್ಯಾಧಿಕಾರಿಗಳು ಸೂಚಿಸಿದ್ದಾರೆ.
ಕೊಂಡಜ್ಜಿಯಲ್ಲಿ ಇಂದು ಸುಗಮ ಸಂಗೀತ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬಹುಜನ ಸಮಾಜ ಸೇವಾ ಸಂಘ, ಇಂದಿರಾಗಾಂಧಿ ವಸತಿ ಶಾಲೆ (ಕೊಂಡಜ್ಜಿ) ಇವರ ಸಹಯೋಗದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಕೊಂಡಜ್ಜಿಯಲ್ಲಿ ಸಂಸ್ಕೃತಿ-ಸಂಭ್ರಮದ ಅಂಗವಾಗಿ ಹೆಗ್ಗೆರೆ ರಂಗಪ್ಪ ಮತ್ತು ಸಂಗಡಿಗರಿಂದ ಸುಗಮ ಸಂಗೀತ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ.
ನಗರದಲ್ಲಿ ಇಂದು ಬಸವ ಬಳಗದಿಂದ ಸಂವಾದ
ಬಸವ ಬಳಗ, ಜಾಗತಿಕ ಲಿಂಗಾಯತ ಮಹಾಸಭಾ, ಶರಣ ಸಾಹಿತ್ಯ ಪರಿಷತ್, ಕದಳಿ ಮಹಿಳಾ ವೇದಿಕೆ ಹಾಗೂ ಕರುಣಾ ಜೀವ ಕಲ್ಯಾಣ ಟ್ರಸ್ಟ್ ವತಿಯಿಂದ ಇಂದು ಸಂಜೆ 5.30 ಕ್ಕೆ ಸರಸ್ವತಿ ಬಸವ ಬಳಗದ ಆವರಣದಲ್ಲಿ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ
ಸ್ವಚ್ಚ ಭಾರತ್ ಮಿಷನ್: ಅರ್ಜಿ ಆಹ್ವಾನ
ಸ್ವಚ್ಛ ಭಾರತ್ ಮಿಷನ್ 2.0 ರ ಅಡಿಯಲ್ಲಿ ಐಇಸಿ ಚಟುವಟಿಕೆಗಳನ್ನು ಕೈಗೊಳ್ಳಲು ಸ್ವಸಹಾಯ ಗುಂಪು ಎಸ್ಹೆಚ್ಜಿ, ಸರ್ಕಾರೇತರ ಸಂಸ್ಥೆ ಎನ್ಜಿಓ ಸದಸ್ಯರ ನೇಮಕಾತಿಗಾಗಿ ಆಸಕ್ತಿಯುಳ್ಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಫೇಸ್ಬುಕ್ ಯುವತಿ ನಂಬಿ 30 ಲಕ್ಷ ಕಳೆದುಕೊಂಡ ಶಿಕ್ಷಕ !
ಫೇಸ್ಬುಕ್ ಮೂಲಕ ಪರಿಚಯವಾದ ಯುವತಿಯೊಬ್ಬಳು ಬ್ಯುಸಿನೆಸ್ ಮಾಡುವ ನೆದಲ್ಲಿ ತಾಲ್ಲೂಕಿನ ಮೋಟೆ ಬೆನ್ನೂರು ಯೋಗ ಶಿಕ್ಷಕ ರೊಬ್ಬರಿಗೆ ಬರೋಬ್ಬರಿ 30 ಲಕ್ಷ ರೂ. ವಂಚಿಸಿದ ಕುರಿತು ಇಲ್ಲಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ.
ಪೊಲೀಸ್ ಕ್ವಾರ್ಟ್ರಸ್ ಹಿಂಭಾಗದ ಮನೆಗೆ ಕನ್ನ 5.08 ಲಕ್ಷ ರೂ. ಚಿನ್ನಾಭರಣ ದೋಚಿದ ಕಳ್ಳರು
ಇಲ್ಲಿನ ಭಗತ್ ಸಿಂಗ್ ನಗರದ (ಪೊಲೀಸ್ ಕ್ವಾರ್ಟ್ರಸ್ ಹಿಂಭಾಗ) 2ನೇ ಕ್ರಾಸ್ ನ ಮನೆಯೊಂದರಲ್ಲಿ ಕಳ್ಳತನ ಮಾಡಿರುವ ಕಳ್ಳರು 5.08 ಲಕ್ಷ ರೂ. ಚಿನ್ನ, ಬೆಳ್ಳಿ ಆಭರಣ ಸೇರಿದಂತೆ ವಸ್ತುಗಳನ್ನು, ಆಸ್ತಿ ದಾಖಲೆಗಳನ್ನು ದೋಚಿ ಪರಾರಿ ಯಾಗಿದ್ದಾರೆ.
ನಗರದಲ್ಲಿ ಇಂದು `ವಿಭವ ವಿಕಾಸ’ ವಿದ್ಯಾರ್ಥಿ ಸಂಘದ ಉದ್ಘಾಟನೆ
ಗುರುಬಸಮ್ಮ ವಿ. ಚಿಗಟೇರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ ಹಾಗೂ ಶಿವಣ್ಣ ಚಿಗಟೇರಿ ಶಿಶುವಿಹಾರದ ವತಿಯಿಂದ ನರಸರಾಜ ರಸ್ತೆಯ ಗುರುಬಸಮ್ಮ ವಿ. ಚಿಗಟೇರಿ ಶಾಲಾ ಆವರಣದಲ್ಲಿ `ವಿಭವ ವಿಕಾಸ 2024-25' ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯ ಕ್ರಮವನ್ನು ಇಂದು ಮಧ್ಯಾಹ್ನ 3ಕ್ಕೆ ಹಮ್ಮಿಕೊಳ್ಳ ಲಾಗಿದೆ.
ನಿರಾಶದಾಯಕ ಕೇಂದ್ರ ಬಜೆಟ್ : ವೀರಣ್ಣ
ಕೇಂದ್ರ ಬಜೆಟ್ನಲ್ಲಿ ರಾಜ್ಯಕ್ಕೆ ಮತ್ತು ದಾವಣಗೆರೆಗೆ ಏನೂ ಸಿಕ್ಕಿಲ್ಲ, ನಿರಾಶದಾಯಕವಾದ ಬಜೆಟ್ ಆಗಿದೆ ಎಂದು ಮಾಜಿ ನಗರಸಭೆ ಅಧ್ಯಕ್ಷ ಬಿ. ವೀರಣ್ಣ ಟೀಕಿಸಿದ್ದಾರೆ.
ಮದರ್ ಥೆರೆಸಾ, ಡಾ. ಬಿ.ಸಿ. ರಾಯ್ ಸೇವಾ ಪ್ರಶಸ್ತಿ ಪ್ರದಾನ
ಕರುಣಾ ಜೀವ ಕಲ್ಯಾಣ ಟ್ರಸ್ಟ್ನಿಂದ ನಗರದ ಮಹಿಳೆಯರು ಮತ್ತು ಮಕ್ಕಳ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಗೆ ಈಚೆಗೆ ಮದರ್ ಥೆರೆಸಾ ಮತ್ತು ಡಾ. ಬಿ.ಸಿ. ರಾಯ್ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ತೊಗರಿ ಬೆಳೆ ನಿರ್ವಹಣೆಗೆ ಬೇಸಾಯ ತಜ್ಞರ ಸಲಹೆ
ಜಿಲ್ಲೆಯಲ್ಲಿ ತೊಗರಿ ಬೆಳೆಯ ವಿಸ್ತರಣೆ ಮುಂಗಾರಿನಲ್ಲಿ ಹೆಚ್ಚಾಗಿದೆ. ತೊಗರಿ ಅಂತರ ಬೆಳೆಯಾಗಿ ಮೆಕ್ಕೆಜೋಳ, ಅಡಿಕೆ ಹಾಗೂ ಇತರೆ ಬೆಳೆಗಳಲ್ಲಿ ಬೆಳೆಯಲಾಗಿದೆ ಈ ನಿಟ್ಟಿನಲ್ಲಿ ತೊಗರಿಯ ಇಳುವರಿ ಹೆಚ್ಚಿಸಲು ಸೂಕ್ತ ಕ್ರಮ ಕೈಗೊಳ್ಳುವುದು ಅತ್ಯಗತ್ಯ
ಸ್ನೇಹದಿಂದ ಸಂಸ್ಥೆಯ ವಾರ್ಷಿಕೋತ್ಸವ
ರಾಣೇಬೆನ್ನೂರು : ಇಲ್ಲಿನ ಶ್ರೀರಾಮ ನಗರದ ಸ್ನೇಹದೀಪ ಅಂಧ ಅಂಗವಿಕಲರ ಸಂಸ್ಥೆಯಲ್ಲಿ ಶನಿವಾರ ಸಂಸ್ಥೆಯ 8ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಉಪಸಭಾಪತಿ ರುದ್ರಪ್ಪ ಲಮಾಣಿ ಉದ್ಘಾಟಿಸಿದರು.
ಶ್ರೀ ಗುರು ವಾದ್ಯ ವೃಂದದಿಂದ ಗಣೇಶ್ ಬಿಸಲೇರಿ ಅವರಿಗೆ ಸನ್ಮಾನ
ಚಿತ್ರದುರ್ಗ : ದಾವಣಗೆರೆಯ ಹಿರಿಯ ರಂಗಭೂಮಿ ಕಲಾವಿದ ಚಿಂದೋಡಿ ಶಂಭುಲಿಂಗಪ್ಪ ಅವರ ಶ್ರೀ ಗುರು ವಾದ್ಯ ವೃಂದದಿಂದ ಚಿತ್ರದುರ್ಗದ ತ.ರಾ.ಸು ರಂಗಮಂದಿರದಲ್ಲಿ ನಿನ್ನೆ ನಡೆದ ನಾಟಕೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ನಗರದ ಬಿ.ಕೆ. ಗಣೇಶ್ ಬಿಸಲೇರಿ ಅವರನ್ನು ಸನ್ಮಾನಿಸಲಾಯಿತು.
ನಗರದಲ್ಲಿ ಶ್ರೀ ಜಯತೀರ್ಥರ ಆರಾಧನೆ
ಸ್ಥಳೀಯ ಪಿ.ಜೆ. ಬಡಾವಣೆಯ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ಜಯತೀರ್ಥರ ಆರಾಧನೆ ಮಹೋತ್ಸವವು ಜರುಗಿತು.
ಹರಿಹರ ಇಂಡಿಯನ್ ಸೌಹಾರ್ದ ಕೋ-ಆಪ್ ಸೊಸೈಟಿ ಅಧ್ಯಕ್ಷರಾಗಿ ಸಿ.ಎನ್. ಹುಲಗೇಶ್
ಹರಿಹರ : ಸೊಸೈಟಿಯ ಅಭಿವೃದ್ಧಿಗೆ ನಿಸ್ವಾರ್ಥ ಸೇವೆ ಸಲ್ಲಿಸಿರುವುದನ್ನು ಗುರುತಿಸಿ ನನಗೆ ಮತ್ತೊಂದು ಅವಧಿಗೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದರಿಂದ ಸೊಸೈಟಿ ಇನ್ನಷ್ಟು ಪ್ರಗತಿ ಸಾಧಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ದಿ ಇಂಡಿಯನ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಸಿ.ಎನ್. ಹುಲಗೇಶ್ ಹೇಳಿದರು.
ಹರಪನಹಳ್ಳಿ ಎಡಿಬಿ ಕಾಲೇಜಿನಲ್ಲಿ ಶ್ರಮದಾನ
ಹರಪನಹಳ್ಳಿ : ಪಟ್ಟಣದ ಅಂಬ್ಲಿ ದೊಡ್ಡ ಭರ್ಮಪ್ಪ ಪ್ರಥಮ ದರ್ಜೆ ಮಹಾವಿದ್ಯಾಲಯದ ಆವರಣದಲ್ಲಿ ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಶ್ರಮದಾನ ಕಾರ್ಯ ನಡೆಯಿತು.
ಗೋಣಿವಾಡದಲ್ಲಿ ಅರ್ಥಪೂರ್ಣ ಗುರು ಪೂರ್ಣಿಮೆ
ಗೋಣಿವಾಡದ ಶ್ರೀ ಸೋಮೇಶ್ವರ ವಸತಿಯುತ ವಿದ್ಯಾಲಯ ಹಾಗೂ ಸರ್.ಎಂ.ವಿ. ಎಲೈಟ್ ಒಲಂಪಿಯಾಡ್ ಶಾಲೆಯಲ್ಲಿ ಅರ್ಥಪೂರ್ಣವಾಗಿ ಗುರು ಪೂರ್ಣಿಮೆ ಆಚರಿಸಲಾಯಿತು.
ಮಕ್ಕಳ ಸುರಕ್ಷತೆಯಲ್ಲಿ ಎಲ್ಲರೂ ಒಗ್ಗೂಡಬೇಕು
ಡಾನ್ ಬಾಸ್ಕೋ ಸಂಸ್ಥೆ, ದಾವಣಗೆರೆ, ಬ್ರೆಡ್ಸ್ ಸಂಸ್ಥೆ ಬೆಂಗಳೂರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗಾಂಧಿನಗರ ಹಾಗೂ ವಿವಿಧ ಸ್ಥಳೀಯ ಇಲಾಖೆಗಳು, ಸಮುದಾಯ ಸಹಭಾಗಿದಾರರು ಇವರ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ರಕ್ಷಣಾ ಜಾಲಬಂಧ ಮತ್ತು ಮಕ್ಕಳ ರಕ್ಷಣಾ ವಿಧಾನಗಳ ಮನವರಿಕೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಗುರುಪೂರ್ಣಿಮೆ ನಿರಂತರವಾಗಿರಲಿ
ಗುರುಪೂರ್ಣಿಮೆ ಎಂಬುದು ಕೇವಲ ಒಂದು ದಿನಕ್ಕೆ ಸೀಮಿತವಾಗದಿರಲಿ. ಪ್ರತಿ ನಿತ್ಯವೂ ಗುರುಪೂರ್ಣಿಮೆ ಆಗಿರಬೇಕು ಎಂದು ತಾಲ್ಲೂಕಿನ ಅಣಜಿ ಇಂದಿರಾಗಾಂಧಿ ವಸತಿ ಶಾಲೆಯ ವಿಜ್ಞಾನ ಶಿಕ್ಷಕಿ ಬಿ.ಆರ್. ಸುಜಾತ ಹೇಳಿದರು.
ಆದಿ ಜಾಂಬವ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ್ಗೆ ಸನ್ಮಾನ
ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷ ಜಿ.ಎಸ್. ಮಂಜುನಾಥ್ ಅವರು ಇಂದು ನಗರದ ಸರ್ಕ್ಯೂಟ್ ಹೌಸ್ ಗೆ ಆಗಮಿಸಿದ ಸಂದರ್ಭದಲ್ಲಿ ಅವರನ್ನು ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಕೆ.ಎಸ್. ಗೋವಿಂದರಾಜ್ ಮತ್ತು ಪ್ರಧಾನ ಕಾರ್ಯದರ್ಶಿ ಎಸ್.ಕೆ. ಪಾಂಡುರಾಜ್ ಸ್ವಾಗತಿಸಿದರು.
ದೈಹಿಕ ಶಿಕ್ಷಕರಿಗೆ ವೃತ್ತಿ ಗೌರವ ಮುಖ್ಯ
ಹರಿಹರ : ಶಾಲೆಯಲ್ಲಿ ವಿದ್ಯಾರ್ಥಿಗಳು ಶಿಸ್ತುಬದ್ಧವಾಗಿ ಮತ್ತು ಶಾಂತಿಯುತ ವಾಗಿ ನಡೆದುಕೊಳ್ಳುವುದ್ಕಕೆ ದೈಹಿಕ ಶಿಕ್ಷಣದ ಪಾತ್ರ ಹೆಚ್ಚು ಪ್ರಾಮುಖ್ಯತೆ ಹೊಂದಿರುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ ಹೇಳಿದರು.
ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಿ ಇದ್ದರೂ ಸಾರ್ವಜನಿಕರಿಗೆ ಪ್ರತ್ಯೇಕ ಖಾಸಗಿ ಔಷಧಿ ಅಂಗಡಿಗೆ ಬರೆಯುವ ವೈದ್ಯರು!
ಹರಿಹರ : ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿನ ವೈದ್ಯರುಗಳ ಬಳಿ ಚಿಕಿತ್ಸೆ ಪಡೆಯಲು ಬರುವ ರೋಗಿಗಳಿಗೆ ಚಿಕಿತ್ಸೆ ನೀಡಿ ಆಸ್ಪತ್ರೆಯಲ್ಲಿ ಔಷಧಿಗಳು ಇದ್ದರೂ ಸಹ ಔಷಧಿಗಳನ್ನು ಪ್ರತ್ಯೇಕ ಔಷಧಿ (ಖಾಸಗಿ) ಅಂಗಡಿಗಳಿಂದ ತರಲು ಚೀಟಿಯನ್ನು ಬರೆದುಕೊಡುತ್ತಿದ್ದಾರೆ
ಪ್ಯಾನಿಕ್ ಬಟನ್, ಜಿಪಿಎಸ್ ವ್ಯವಸ್ಥೆ ಕೈಬಿಡಲು ಆಗ್ರಹಿಸಿ ಪ್ರತಿಭಟನೆ
ರಾಣೇಬೆನ್ನೂರು : ರಾಜ್ಯದಲ್ಲಿ ಟ್ಯಾಕ್ಸಿಗಳಿಗೆ ಅಳವಡಿಸಲು ಸೂಚಿಸಿರುವ ಪ್ಯಾನಿಕ್ ಬಟನ್ ಹಾಗೂ ಜಿಪಿಎಸ್ ವ್ಯವಸ್ಥೆ ಕೈಬಿಡುವಂತೆ ಆಗ್ರಹಿಸಿ ನಗರದ ಹಳೇ ಪಿ.ಬಿ.ರಸ್ತೆ ಶ್ರೀ ವಿನಾಯಕ ಕಾರು ಚಾಲಕರ ಮತ್ತು ಮಾಲೀಕರ ಸಂಘದ ಸದಸ್ಯರು ಗುರುವಾರ ನಗರದಲ್ಲಿ ಪ್ರತಿಭಟಿಸಿ, ಎ.ಆರ್.ಟಿ.ಓ ಕಛೇರಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಪ್ರವೀಣ್ ಕಮ್ಮಾರ್ಗೆ ಪಿಹೆಚ್ಡಿ
ನಗರದ ಮಹಿಳಾ ಸೇವಾ ಸಮಾಜ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ಎ.ವಿ. ಕಮಲಮ್ಮ ಕಾಲೇಜಿನಲ್ಲಿ ಅರ್ಥಶಾಸ್ತ್ರ ಉಪನ್ಯಾಸಕ ಪ್ರವೀಣ್ ಕಮ್ಮಾರ ಅವರು ತಮಿಳುನಾಡಿನ ಅಣ್ಣಾಮಲೈ ಯೂನಿವರ್ಸಿಟಿಯಿಂದ ಪಿಹೆಚ್ಡಿ ಪದವಿ ಪಡೆದಿದ್ದಾರೆ.
ಹೆದ್ದಾರಿ : ಗುಂಡಿ ಮುಚ್ಚುವ ಕೆಲಸ ಆರಂಭ
ಮಲೇಬೆನ್ನೂರು : ಸತತ ಮಳೆಯಿಂದಾಗಿ ಪಟ್ಟಣದಲ್ಲಿ ಹಾಯ್ದು ಹೋಗಿರುವ ಶಿವಮೊಗ್ಗ ಹೆದ್ದಾರಿಯಲ್ಲಿ ಬಿದ್ದಿರುವ ದೊಡ್ಡ - ದೊಡ್ಡ ಗುಂಡಿಗಳನ್ನು ಮುಚ್ಚುವ ಕೆಲಸಕ್ಕೆ ಗುರುವಾರ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.
ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ
2024-25ನೇ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯ 30ನೇ ವಾರ್ಡ್ ಆವರಗೆರೆ ಮನೆ-ಮನೆಗೆ ತೆರಳಿ ಇಂದು ಸರ್ವೆ ನಡೆಸಲಾಯಿತು.
ಇಂದಿನಿಂದಲೇ ಭದ್ರಾ ನೀರು ಹರಿಸಲು ಧನಂಜಯ ಆಗ್ರಹ
ಆಗಸ್ಟ್ 5 ಅಥವಾ 6 ರಂದು ಭದ್ರಾ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆ ಕರೆದು, ತದನಂತರ ನಾಲೆಗೆ ನೀರು ಹರಿಸಲು ತೀರ್ಮಾನಿಸಬೇಕು ಎಂದು ನಿನ್ನೆ ನಡೆದ ಕರ್ನಾಟಕ ನೀರಾವರಿ ನಿಗಮದ ಸಭೆಯಲ್ಲಿ ಭದ್ರಾ ಅಚ್ಚುಕಟ್ಟು ಪ್ರದೇಶದ ಶಾಸಕರು ಸಚಿವರು ಚರ್ಚಿಸಿರುವುದು ದುರ್ದೈವ ಸಂಗತಿಯಾಗಿದೆ
ರಾಣೇಬೆನ್ನೂರಿನಲ್ಲಿ ಇಂದು ಪತ್ರಿಕಾ ದಿನಾಚರಣೆ
ರಾಣೇಬೆನ್ನೂರು ತಾಲ್ಲೂಕು ಪತ್ರಕರ್ತರ ಸಂಘದಿಂದ ಎಸ್ಜೆಎಂವಿ ಮಹಿಳಾ ಮಹಾವಿದ್ಯಾಲಯದ ಸಭಾಭವನದಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ಪತ್ರಿಕಾ ದಿನಾವನ್ನು ಆಚರಿಸಲಾಗುತ್ತಿದ್ದು, ಹಿರಿಯ ಪತ್ರಕರ್ತ ಅರುಣಕುಮಾರ ಹಬ್ಬು ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಎಸ್.ಎಸ್. ಗಣೇಶ್ ದಂಪತಿಯಿಂದ ಶಿರಡಿ ಸಾಯಿಬಾಬಾಗೆ ವಿಶೇಷ ಪೂಜೆ
ನಗರದ ಎಂ.ಸಿ.ಸಿ. `ಎ' ಬ್ಲಾಕ್ನಲ್ಲಿರುವ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಮೊನ್ನೆ ನಡೆದ ಗುರು ಪೂರ್ಣಿಮೆ ಕಾರ್ಯಕ್ರಮದ ಸಂದರ್ಭದಲ್ಲಿ ಕೈಗಾರಿಕೋದ್ಯಮಿ ಎಸ್.ಎಸ್. ಗಣೇಶ್ ಹಾಗೂ ಪತ್ನಿ ಶ್ರೀಮತಿ ರೇಖಾ ಗಣೇಶ್ ದಂಪತಿ ವಿಶೇಷ ಪೂಜೆ ಸಲ್ಲಿಸಿದರು.
`ಗುಂಡಿ’ ಶಾಲೆಯ ಹಿರಿಯ ವಿದ್ಯಾರ್ಥಿಗಳಿಂದ ಗುರು ನಮನ
ಗುಂಡಿ ಮಹಾದೇವಪ್ಪ ಶಾಲೆಯ ಹಿರಿಯ ವಿದ್ಯಾರ್ಥಿಗಳಿಂದ ನಗರದ ಕನ್ನಡ ಭವನದಲ್ಲಿ ಗುರು ಪೂರ್ಣಿಮೆ ಪ್ರಯುಕ್ತ ಗುರು ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಬ್ರಹ್ಮ ವಿಷ್ಣು ಮಹೇಶ್ವರರ ಪ್ರತೀಕವೇ ಗುರು : ಸ್ವಾಮಿ ತ್ಯಾಗೀಶ್ವರಾನಂದಜೀ
ಮಗುವಿಗೆ ತಂದೆ-ತಾಯಿಯರು ರಕ್ತ ಸಂಬಂಧಿಗಳಾದರೆ, ಗುರು ಶಿಷ್ಯನಿಗೆ ಭಾವ ಸಂಬಂಧಿ ಎಂದು ರಾಮಕೃಷ್ಣ ಆಶ್ರಮದ ಕಾರ್ಯದರ್ಶಿ ಸ್ವಾಮಿ ತ್ಯಾಗೀಶ್ವರಾನಂದಜೀ ತಿಳಿಸಿದರು.
ತ್ಯಾಗ ಜೀವಿಗಳು ಮಾತ್ರ ನೆನಪಿನಲ್ಲಿರುವರು
ಸರ್ಕಾರ ಅನೇಕ ಮಹನೀಯ ಜಯಂತಿಯನ್ನು ಆಚರಿಸುತ್ತಿದ್ದು ಸಮಾಜದ ಒಳತಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟು ಸೇವೆ ಹಾಗೂ ತ್ಯಾಗ ಮಾಡಿದವರು ಮಾತ್ರ ಜನಮಾನಸದಲ್ಲಿ ಉಳಿಯಲು ಸಾಧ್ಯವೆಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.
ಜಡ್ಜ್ ಭೇಟಿ ಪರಿಣಾಮ, ಸುಸ್ಥಿತಿಗೆ ಮರಳಿದ ಅಂಗನವಾಡಿ ಕೇಂದ್ರಗಳು
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ್ ಕರೆಣ್ಣವರ ಆಜಾದ್ ನಗರದ ವೆಂಕಾಭೋವಿ ಕಾಲೋನಿಯ ಅಂಗನವಾಡಿ ಕೇಂದ್ರಗಳಿಗೆ ಮೊನ್ನೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಗಮನ ಸೆಳೆದಿದ್ದರು.
ವಾಣಿಜ್ಯ ಉಪಯೋಗಕ್ಕೆ ಟ್ರ್ಯಾಕ್ಟರ್ ಬಳಕೆ : ಕ್ರಮಕ್ಕೆ ಆರ್ಟಿಓಗೆ ಒತ್ತಾಯ
ಟ್ರ್ಯಾಕ್ಟರ್ ಗಳನ್ನು ವಾಣಿಜ್ಯ ಉಪಯೋಗಕ್ಕೆ ಬಳಕೆ ಮಾಡುತ್ತಿರುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದ್ದು, ಈ ಬಗ್ಗೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಜೆಡಿಎಸ್ ಮುಖಂಡ ಎಂ.ಎನ್. ನಾಗರಾಜ್ ಒತ್ತಾಯಿಸಿದ್ದಾರೆ.
ಗುರು ಭಜನೆಯಿಂದ ಶಾಂತ ಸ್ವಭಾವ ಲಭಿಸಲಿದೆ
ನಿತ್ಯವು ಗುರು ಭಜನೆಯಲ್ಲಿ ತೊಡಗಿದರೆ ಮನಸ್ಸು ಸ್ಥಿರತೆಗೊಂಡು ಶಾಂತ ಸ್ವಭಾವ ಮರಳಲಿದೆ ಎಂದು ಹಿರಿಯ ಸನ್ನದು ಲೆಕ್ಕ ಪರಿಶೋಧಕ ಎನ್.ಜಿ. ಗಿರೀಶ್ ನಾಡಿಗ್ ಅಭಿಪ್ರಾಯಪಟ್ಟರು.
ಕಸ ಹಾಕದಂತೆ ಮೂತ್ರ ವಿಸರ್ಜನೆ ಮಾಡದಂತೆ ಜಾಗೃತಿ ಪೋಸ್ಟರ್
ನಗರದ ವಿವಿಧ ಕಡೆ ಇರುವ ಬೆಸ್ಕಾಂ ಯುಜಿ ಕೇಬಲ್ ಬಾಕ್ಸ್ ಗಳ ಬಳಿ ಕೆಲವು ಸಾರ್ವಜನಿಕರು ಹಾಗೂ ಕೆಲವು ಅಂಗಡಿಯವರು ಕಸ ಹಾಕುತ್ತಿದ್ದು, ಇದರ ಅಕ್ಕ ಪಕ್ಕದಲ್ಲಿ ಸಾರ್ವಜನಿಕರು ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ.