ಹಳೆಪೇಟೆಯ ಶ್ರೀ ವೀರಭದ್ರೇಶ್ವರ ಸ್ವಾಮಿ ರಥೋತ್ಸವದ ಹಿನ್ನೆಲೆ ಯಲ್ಲಿ ದೇವಸ್ಥಾನದ ಆವರಣದಲ್ಲಿ ಸೋಮವಾರ ಗುಗ್ಗುಳ ಹಾಗೂ ಅಗ್ನಿ ಕುಂಡ ನಡೆಯಿತು.
ಗಾಳಿಪಟದಲ್ಲಿ ಮತದಾನ ಜಾಗೃತಿ
ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಸೋಮವಾರ ನಗರದ ಹೈಸ್ಕೂಲ್ ಮೈದಾನದಲ್ಲಿ ಗಾಳಿಪಟ ಹಾರಿಸುವ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.
ದೇಶದ ಯುವಕರಿಗೆ ಮೋದಿಯೇ ಗ್ಯಾರಂಟಿ
ಹರಪನಹಳ್ಳಿ : ಯುವಕರು ಈ ದೇಶದ ಭವಿಷ್ಯ. ಅಂತಹ ಯುವಕರಿಗೆ ಮೋದಿ ಜೀ ಅವರೇ ಒಂದು ನಿಜವಾದ ಗ್ಯಾರಂಟಿ. ಅಗ್ನಿವೀರ್ ನೇಮಕಾತಿ ಮೂಲಕ ಯುವಕರಿಗೆ ಉದ್ಯೋಗ ಕೊಡುವ ಜೊತೆಗೆ ರಾಷ್ಟ್ರ ಪ್ರೇಮ ಜಾಗೃತಗೊಳಿಸುವ ಕೆಲಸ ಮಾಡುತ್ತಿದ್ದಾರೆ.
ನುಡಿದಂತೆ ನಡೆದಿದ್ದೇವೆ, ನಡೆಯುತ್ತೇವೆ, ಇದು ನಮ್ಮ ಗ್ಯಾರಂಟಿ
ಮಲೇಬೆನ್ನೂರು : ನಾವು ನುಡಿದಂತೆ ನಡೆದಿದ್ದೇವೆ, ನಡೆಯುತ್ತೇವೆ ಇದು ನಮ್ಮ ಗ್ಯಾರಂಟಿ. ಕಾಂಗ್ರೆಸ್ ಸರ್ಕಾರ ಎಂದರೇ ಗ್ಯಾರಂಟಿ ಎಂದು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಹೇಳಿದರು.
ನೇಹಾ ಹತ್ಯೆ ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹ
ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಮಾಡಿದ ಹಂತಕನಿಗೆ ಶೀಘ್ರ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಸೋಮವಾರ ಬಿಜೆಪಿಯ ಯುವ, ಮಹಿಳಾ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದಲ್ಲಿ ಇಂದು ಚಿತ್ರಕಲಾ ಸ್ಪರ್ಧೆ
ಮತದಾರರ ಜಾಗೃತಿಗೆ ಇಂದು ಬೆಳಿಗ್ಗೆ 10 ಗಂಟೆಗೆ ಸಿ.ಜಿ. ಆಸ್ಪತ್ರೆ ಹತ್ತಿರ, ವಿಶ್ವೇಶ್ವರಯ್ಯ ಪಾರ್ಕ್ನಲ್ಲಿ ಇಂದು ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳು ಹಾಗೂ ಚಿತ್ರಕಲಾ ಶಿಕ್ಷಕರು ಭಾಗವಹಿಸಬಹುದು
ಸಿಲಿಂಡರ್ ಗೆದ್ದೇ ಗೆಲ್ಲುತ್ತೆ : ವಿನಯ್ಕುಮಾರ್ ವಿಶ್ವಾಸ
ಕರುಣಾ ಜೀವ ಕಲ್ಯಾಣ ಟ್ರಸ್ಟಿನ ವತಿಯಿಂದ ಇಂದು ಸಂಜೆ 5 ಕ್ಕೆ ಶ್ರೀ ಡಾ. ಸದ್ಯೋಜ್ಯಾತ ಶಿವಾಚಾರ್ಯ ಹಿರೇಮಠದ ಆವ ರಣದಲ್ಲಿ 150ನೇ ಸೈಕಲ್ ವಿತರಣೆ ಅಂಗವಾಗಿ ಇಂದು 50 ಸೈಕ ಲ್ಗಳ ವಿತರಣಾ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿದೆ.
ನಗರದಲ್ಲಿ ಇಂದು ಮಜ್ಜಿಗೆ ವಿತರಣೆ
ಕರುಣಾ ಜೀವ ಕಲ್ಯಾಣ ಟ್ರಸ್ಟ್ನಿಂದ 1 ತಿಂಗಳು ನಡೆಸುತ್ತಿರುವ ಮಜ್ಜಿಗೆ ವಿತರಣಾ ಕಾರ್ಯಕ್ರಮಕ್ಕೆ ಶ್ರೀಮತಿ ತ್ರಿವೇಣಿ ಶ್ರೀ ಡಾ.ಪಿ.ಮಲ್ಲೇಶ್ ಮತ್ತು ಕುಟುಂಬದವರು, ಎನ್. ರೇವಣಸಿದ್ದಪ್ಪ, ಜಗಮೋಹನ ತುಳಸಿಯಾನ ಅವರು ಇಂದಿನ ದಾನಿಗಳಾಗಿದ್ದಾರೆ.
ಇಂದು ಸೈಕಲ್ ಜಾಥಾ
ಮತದಾರರ ಜಾಗೃತಿ ಅಂಗವಾಗಿ ಇಂದು ಬೆಳಿಗ್ಗೆ 7 ಕ್ಕೆ ಅನುಭವ ಮಂಟಪ ಶಾಲೆಯಿಂದ ಜಿಲ್ಲಾ ಕ್ರೀಡಾಂಗಣ ದವರೆಗೆ ಸೈಕಲ್ ಜಾಥಾ ಏರ್ಪಡಿಸಲಾಗಿದೆ.
ನಾಳೆ 85 ವರ್ಷ ಮೇಲ್ಪಟ್ಟ ನಾಗರಿಕರು, ವಿಶೇಷಚೇತನರು ಮನೆಯಲ್ಲಿಯೇ ಮತದಾನ
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ದೇಶದ ಮೂರನೇ ಹಂತ, ರಾಜ್ಯದಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಡೆಯುತ್ತಿದ್ದು, 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಲ್ಲಿಯೇ ಮತದಾನ ಮಾಡಲು ಚುನಾವಣಾ ಆಯೋಗ ಅವಕಾಶ ಮಾಡಿಕೊಟ್ಟಿದೆ.
ಸತ್ಯನಾರಾಯಣಪುರದಲ್ಲಿ ಶ್ರೀರಾಮ ದೇವಸ್ಥಾನ ಉದ್ಘಾಟನೆ
ಹರಿಹರ ತಾಲ್ಲೂಕು ಸತ್ಯನಾರಾಯಣಪುರ (ಕುಂದುವಾಡ ಕ್ಯಾಂಪ್)ದಲ್ಲಿ ನೂತನವಾಗಿ ಕಲ್ಲಿನಲ್ಲಿ ನಿರ್ಮಿಸಲಾಗಿರುವ ಶ್ರೀರಾಮ ದೇವಸ್ಥಾನ, ಶ್ರೀ ಸೀತಾರಾಮ ಲಕ್ಷ್ಮಣ, ಹನುಮಂತ ಸಮೇತ ಶ್ರೀ ಮಹಾಗಣಪತಿ, ಶ್ರೀ ಮಹಾಲಕ್ಷ್ಮಿ ವಿಗ್ರಹಗಳ ಪುನಃ ಪ್ರತಿಷ್ಠಾಪನಾ ಮಹೋತ್ಸವದ ಕಾರ್ಯಕ್ರಮಗಳು ಆರಂಭವಾಗಿವೆ.
ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ದನಿ ಎತ್ತಿದ ಶಾಸಕ ಹರೀಶ್ಗೆ ಪ್ರಾಣ ಬೆದರಿಕೆ
ಮರಳು ಗಣಿಗಾರಿಕೆ ಮಾಲೀಕರ ಸಹೋದರನೊಬ್ಬ ಹರಿಹರ ಶಾಸಕ ಬಿ.ಪಿ. ಹರೀಶ್ ಅವರಿಗೆ ಪ್ರಾಣ ಬೆದರಿಕೆ ಹಾಕಿದ್ದು, ಅವರನ್ನು ಬಂಧಿಸಬೇಕು ಹಾಗೂ ಶಾಸಕ ಹರೀಶ್ ಅವರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಲಾಗಿದೆ
ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಲೋಕಸೇವಾ ಆಯೋಗ ನಡೆಸಲಿರುವ ಕೆಎಎಸ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕರಾಮುವಿ ಕೇಂದ್ರ ಕಚೇರಿಯಲ್ಲಿ ನಡೆಸಲಾಗುವುದು.
ನಗರಕ್ಕಿಂದು ವಿ.ನ್ಯಾಯಮೂರ್ತಿ ಹೆಚ್. ಬಿಲ್ಲಪ್ಪ
ಜಿಲ್ಲಾ ವಕೀಲರ ಸಂಘದ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರ 133ನೇ ಜಯಂತಿ ಅಂಗವಾಗಿ ಅಂಬೇಡ್ಕರ್ ಮತ್ತು ಸಂವಿಧಾನ ಎನ್ನುವ ವಿಷಯ ಕುರಿತು ಉಪನ್ಯಾಸ ಮಾಲಿಕೆ 8ನ್ನು ಇಂದು ಮಧ್ಯಾಹ್ನ 2.30ಕ್ಕೆ ಆಯೋಜಿಸಲಾಗಿದೆ.
ನಗರದಲ್ಲಿ ಇಂದು ಸತ್ಯಸಾಯಿ ಬಾಬಾರವರ ಆರಾಧನಾ ಮಹೋತ್ಸವ
ಶ್ರೀ ಸತ್ಯಸಾಯಿ ಸೇವಾ ಸಂಸ್ಥೆ ವತಿಯಿಂದ ಆರಾಧನಾ ಮಹೋತ್ಸವವು ಪಿ.ಜೆ. ಬಡಾ ವಣೆಯ ಸತ್ಯಸಾಯಿ ಮಂದಿರದಲ್ಲಿ ಇಂದು ನಡೆಯಲಿದೆ.
ಹರಿಹರದಲ್ಲಿ ಹನುಮ ಜಯಂತಿ
ಹನುಮ ಜಯಂತಿ ನಿಮಿತ್ತವಾಗಿ ಶ್ರೀ ಆಂಜನೇ ಯಸ್ವಾಮಿ, ನವಗ್ರಹ ಸ್ವಾಮಿ ಮತ್ತು ಶನೇಶ್ವರ ಸ್ವಾಮಿಗೆ ವಿಶೇಷ ಅಭಿಷೇಕ, ಅಲಂಕಾರ, ಮಹಾ ಮಂಗಳಾರತಿ, ತೊಟ್ಟಿಲು ಪೂಜೆ, ಪ್ರಸಾದ ವಿನಿಯೋಗ ನಂತರ ಸಂಜೆ ಆಂಜನೇಯಸ್ವಾಮಿ ಪಲ್ಲಕ್ಕಿಯಲ್ಲಿ ಉತ್ಸವ ಮೂರ್ತಿಯನ್ನು ಇಟ್ಟು ಮೆರವಣಿಗೆ ಮಾಡಲಾಯಿತು.
ಸಿನಿಮಾ-ಧಾರಾವಾಹಿಗಳಲ್ಲಿ ಬಾಲನಟ, ನಟಿ ಪಾತ್ರಕ್ಕಾಗಿ ಮಕ್ಕಳ ಬಳಕೆ ನಿಷೇಧ
ಬಾಲ ನಟರು ಹಾಗೂ ಬಾಲ ನಟಿಯರ ಪಾತ್ರಕ್ಕಾಗಿ ಮಕ್ಕಳನ್ನು ಬಳಸಿಕೊಳ್ಳಲು ಇಚ್ಛಿಸುವ ಸಿನಿಮಾ ಅಥವಾ ಧಾರಾವಾಹಿ ನಿರ್ದೇಶಕರು, ನಿರ್ಮಾಪಕರು, ಇಲ್ಲವೇ ಆಯೋಜಕರು ಜಿಲ್ಲಾಧಿಕಾರಿಗಳ ಅನುಮತಿ ಪತ್ರ ಪಡೆಯುವುದು ಕಡ್ಡಾಯವಾಗಿದೆ.
ನಗರದಲ್ಲಿ ಮತದಾನ ಜಾಗೃತಿ ಇಂದು
ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ವತಿಯಿಂದ ಇಂದು ಬೆಳಿಗ್ಗೆ 10 ಗಂಟೆಗೆ ವಿಶ್ವೇಶ್ವರಯ್ಯ ಪಾರ್ಕ್ನಲ್ಲಿ ಮತದಾನ ಜಾಗೃತಿ ಅಂಗವಾಗಿ ಚಿತ್ರಕಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಂದ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ
ಲಲಿತಾ ಪಿಯು ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ
ನಗರದ ಲಲಿತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸಿದ್ದಾರೆ.
ಎಲೆಬೇತೂರಿನಲ್ಲಿ ಹನುಮ ಜಯಂತಿ ವಿಶೇಷ ಪೂಜೆ
ಎಲೆಬೇತೂರು ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಹನುಮ ಜಯಂತಿಯ ಪ್ರಯುಕ್ತ ಶ್ರೀ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಹೆಮ್ಮನಬೇತೂರು ಮರುಳಸಿದ್ದೇಶ್ವರ ರಥೋತ್ಸವ
ತಾಲ್ಲೂಕಿನ ಹೆಮ್ಮನಬೇತೂರು ಗ್ರಾಮದಲ್ಲಿ ಮರುಳಸಿದ್ದೇಶ್ವರ ಸ್ವಾಮಿಯ ರಥೋತ್ಸವ ಬರದ ನಡುವೆ ವಿಜೃಂಭಣೆಯಿಂದ ನಡೆಯಿತು.
ನಗರದಲ್ಲಿ ಇಂದು ಪೂರ್ವಭಾವಿ ಸಭೆ
ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್ ಅವರಿಗೆ ಸಿಲಿಂಡರ್ ಗುರುತು ಸಿಕ್ಕ ಹಿನ್ನೆಲೆಯಲ್ಲಿ ಮತದಾರರ ಮನವೊಲಿಸುವ ಕುರಿತಂತೆ ಚರ್ಚಿಸಲು ಇಂದು ಪೂರ್ವಭಾವಿ ಸಭೆ ಕರೆಯಲಾಗಿದೆ.
ನಗರದಲ್ಲಿ ಇಂದು ಕದಳಿ ವೇದಿಕೆಯಿಂದ ಅಕ್ಕಮಹಾದೇವಿ ಜಯಂತ್ಯೋತ್ಸವ
ಕದಳಿ ಮಹಿಳಾ ವೇದಿಕೆ, ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಇವರ ಸಹಯೋಗದಲ್ಲಿ ಇಂದು ಬೆಳಿಗ್ಗೆ 10.30ಕ್ಕೆ 152ನೇ ಕದಳಿ ಕಮ್ಮಟದಲ್ಲಿ ಅಕ್ಕಮಹಾದೇವಿ ಜಯಂತಿ ಹಾಗೂ ದತ್ತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ರಾಣೇಬೆನ್ನೂರಿನಲ್ಲಿ ಇಂದು ವೀರಾಂಜನೇಯ ಸ್ವಾಮಿ ಪ್ರಾಣ ಪ್ರತಿಷ್ಠಾಪನೆ
ಶ್ರೀ ಸಿದ್ದಾರೂಢ ನಗರದಲ್ಲಿ ಶ್ರೀ ವೀರಾಂ ಜನೇಯ ಸ್ವಾಮಿ ಪ್ರಾಣ ಪ್ರತಿಷ್ಠಾಪನೆ, ಆಮೆ ಹಾಗೂ ಗರುಡ ಕಂಬದ ಉದ್ಘಾಟನಾ ಕಾರ್ಯ ಕ್ರಮ, ಧರ್ಮ ಸಭೆ ಇಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
ಕೊಮಾರನಹಳ್ಳಿ : ಇಂದು ಬ್ರಹ್ಮರಥೋತ್ಸವ
ಮಲೇಬೆನ್ನೂರು ಸಮೀಪದ ಕೊಮಾರನಹಳ್ಳಿಯ ಹೆಳವನಕಟ್ಟೆ ಶ್ರೀ ಲಕ್ಷ್ಮಿರಂಗನಾಥ ಸ್ವಾಮಿಯ ಬ್ರಹ್ಮ ರಥೋತ್ಸವವು ಇಂದು ಮಧ್ಯಾಹ್ನ 12 ರಿಂದ 12.30 ರವರೆಗೆ ಜರುಗಲಿದೆ.
ನಗರದ ಅಕ್ಕಮಹಾದೇವಿ ಸಮಾಜದಲ್ಲಿ ಇಂದು ಅಕ್ಕಮಹಾದೇವಿ ಜಯಂತ್ಯೋತ್ಸವ
ಅಕ್ಕಮಹಾದೇವಿ ಸಮಾಜ ವತಿಯಿಂದ ಅಕ್ಕಮಹಾದೇವಿ ಜಯಂತ್ಯೋತ್ಸವ ಹಾಗೂ ವಚನೋತ್ಸವ ಕಾರ್ಯಕ್ರಮವು ಶ್ರೀಮತಿ ಮೋತಿ ಚನ್ನಬಸಮ್ಮ ವೀರಪ್ಪ ಕಲ್ಯಾಣ ಮಂಟಪದಲ್ಲಿ ಇಂದು ಸಂಜೆ ನಡೆಯಲಿದೆ.
ಮಾಜಿ ಸೈನಿಕರ ಮಕ್ಕಳಿಗೆ ಆರ್ಥಿಕ ನೆರವಿಗೆ ಆನ್ಲೈನ್ನಲ್ಲಿ ಅರ್ಜಿ ಆಹ್ವಾನ
ಒಂದನೇ ತರಗತಿಯಿಂದ ವೃತ್ತಿಪರ ಶಿಕ್ಷಣವಲ್ಲದ ಪದವಿಯವರೆಗೆ ವ್ಯಾಸಂಗ ಮಾಡುತ್ತಿರುವ ಹವಾಲ್ದಾರ್ ರಾಂಕ್ವರೆಗಿನ ಮಾಜಿ ಸೈನಿಕರ ಮಕ್ಕಳು ಕೇಂದ್ರೀಯ ಸೈನಿಕ ಮಂಡಳಿಯಿಂದ ಆರ್ಥಿಕ ನೆರವನ್ನು ಪಡೆಯಲು ಕೇಂದ್ರೀಯ ಸೈನಿಕ ಮಂಡಳಿಯ ಜಾಲ ತಾಣ ONLINE.KSB.GOV.IN ನಲ್ಲಿ ಆರ್ಥಿಕ ನೆರವು (ಫೈನಾನ್ಸಿಯಲ್ನ್ಸ್) ಎಂಬ ಶೀರ್ಷಿಕೆಯಡಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
ಐರಣಿಯಲ್ಲಿ ಇಂದಿನಿಂದ ಅಡ್ಡಪಲ್ಲಕ್ಕಿ, ಮಹಾರಥೋತ್ಸವ, ಅಖಂಡ ಭಜನೆ
ರಾಣೇಬೆನ್ನೂರು ತಾಲ್ಲೂಕಿನ ಐರಣಿ ಮನಿಮಠದ ಶ್ರೀ ಗಜದಂಡಸ್ವಾಮಿಗಳ ಸಾನ್ನಿಧ್ಯದಲ್ಲಿ ಮುಪ್ಪಿನಾರ್ಯರ ನೂತನ ಮಹಾರಥೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಇಂದು ಮತ್ತು ನಾಳೆ ನಡೆಯಲಿವೆ ಎಂದು ಶ್ರೀ ಮಠದ ಭಕ್ತ ಹನುಮಂತಪ್ಪ ಚಳಗೇರಿ ತಿಳಿಸಿದ್ದಾರೆ.
ಸಂಸದರ ನಡುವಳಿಕೆಯೇ ನಾನು ಕಾಂಗ್ರೆಸ್ ಸೇರಲು ಕಾರಣ: ಸೋಗಿ ಶಾಂತಕುಮಾರ್
ಸಂಸದರ ನಡವಳಿಕೆಯಿಂದ ಬೇಸತ್ತು, ಹಿರಿಯರಾದ ಶಾಮನೂರು ಶಿವಶಂಕರಪ್ಪ ಹಾಗೂ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ನಾನು ಕಾಂಗ್ರೆಸ್ ಪಕ್ಷ ಸೇರಿದ್ದೇನೆ ಎಂದು ಮಹಾನಗರ ಪಾಲಿಕೆ ಸದಸ್ಯ, ಪಂಚಮಸಾಲಿ ಸಮಾಜದ ಮುಖಂಡ ಸೋಗಿ ಶಾಂತಕುಮಾರ್ ಹೇಳಿದ್ದಾರೆ.
ಧಾರ್ಮಿಕ ಕ್ಷೇತ್ರಗಳು ಪ್ರವಾಸಿ ತಾಣ: ಡಾ. ಪ್ರಭಾ ಭರವಸೆ
ಹೊನ್ನಾಳಿ : ಎರಡನೇ ಮಂತ್ರಾಲಯ ಎಂದೇ ಪ್ರಸಿದ್ದ ಪಡೆದಿರುವ ಹೊನ್ನಾಳಿಯ ಪುಣ್ಯ ಕ್ಷೇತ್ರ ರಾಘವೇಂದ್ರ ಸ್ವಾಮಿ ಬೃಂದಾವನ ಹಾಗೂ ತೀರ್ಥರಾಮೇಶ್ವರ ಕ್ಷೇತ್ರಗಳು ಸೇರಿದಂತೆ ತಾಲ್ಲೂಕಿನ ಐತಿಹಾಸಿಕ ಕ್ಷೇತ್ರಗಳನ್ನು ಪ್ರವಾಸಿ ತಾಣಗಳನ್ನಾಗಿಸಲಾಗುವುದು
ಕೊಮಾರನಹಳ್ಳಿಯಲ್ಲಿ ಸಂಭ್ರಮದ ಬ್ರಹ್ಮ ರಥೋತ್ಸವ
ಮಲೇಬೆನ್ನೂರು : ಕೊಮಾರನಹಳ್ಳಿಯ ಹೆಳವನಕಟ್ಟೆ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿಯ ಬ್ರಹ್ಮ ರಥೋತ್ಸವವು ಮಂಗಳವಾರ ಮಧ್ಯಾಹ್ನ ಅಪಾರ ಭಕ್ತರ ಸಮ್ಮುಖದಲ್ಲಿ ವಾದ್ಯ ಮೇಳಗಳೊಂದಿಗೆ ಸಂಭ್ರಮದಿಂದ ಜರುಗಿತು
ಶ್ರೀ ರಂಭಾಪುರಿ ಜಗದ್ಗುರುಗಳ ಆಶೀರ್ವಾದ ಪಡೆದ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್
ಹರಪನಹಳ್ಳಿ : ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಹರಪನಹಳ್ಳಿ ತೆಗ್ಗಿನ ಮಠದ ಸಂಸ್ಥಾನದಲ್ಲಿ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ನೇಹಾ ಹತ್ಯೆ ಖಂಡಿಸಿ ಜಂಗಮ ಸಮಾಜದ ಪ್ರತಿಭಟನೆ
ಹುಬ್ಬಳ್ಳಿಯ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಖಂಡಿಸಿ ಜಿಲ್ಲಾ ಜಂಗಮ ಸಮಾಜದಿಂದ ನಗರದ ಜಯದೇವ ಸರ್ಕಲ್ನಲ್ಲಿ ಮೊನ್ನೆ ಮೇಣದ ಬತ್ತಿ ಹೊತ್ತಿಸಿ ಪ್ರತಿಭಟನೆ ನಡೆಸಲಾಯಿತು.
ದುಡ್ಡು ಕೊಟ್ಟು ಓಟು ಪಡೆಯುವ ಪದ್ಧತಿ ನಿರ್ಮೂಲನೆ ಆಗಬೇಕು
ನಾನು ಗೆದ್ದರೆ, ಪ್ರಜಾಪ್ರಭುತ್ವ ಉಳಿಸಲು ಹೋರಾಟ ಮಾಡಿದವರಿಗೆ ನ್ಯಾಯ ಒದಗಿಸಿದಂತಾಗುತ್ತದೆ. ಸ್ವಾಭಿಮಾನದ ಚುನಾವಣೆ ಮಾಡೋಣ. ರಾಜಕಾರಣದಲ್ಲಿ ದುಡ್ಡು ಕೊಟ್ಟು ಓಟು ಪಡೆಯುವ ಪದ್ಧತಿ ನಿರ್ಮೂಲನೆ ಆಗಬೇಕು
ಗಾಳಿಪಟದಂತೆ ಸ್ವತಂತ್ರವಾಗಿ ಮತದಾನ ಮಾಡಲು ಕರೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಇವರ ಸಹಾಯದೊಂದಿಗೆ ಸೋಮವಾರ ಹೈಸ್ಕೂಲ್ ಮೈದಾನದಲ್ಲಿ ಗಾಳಿಪಟ ಹಾರಿಸುವ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು .
ಎಲ್ಲೆಡೆ ಸಂಭ್ರಮದ ಹನುಮ ಜಯಂತಿ
ಶ್ರೀರಾಮನ ಪರಮ ಭಕ್ತ ಹನುಮ ಜಯಂತಿ ಅಂಗವಾಗಿ ಜಿಲ್ಲಾದ್ಯಂತ ಮಾರುತಿ ಮಂದಿರಗಳಲ್ಲಿ ಶನಿವಾರ ಶ್ರದ್ಧಾ-ಭಕ್ತಿಯಿಂದ ಪೂಜೆ, ಪುನಸ್ಕಾರ ನೆರವೇರಿಸಲಾಯಿತು.
ಶ್ರೀರಾಮನ ಅಸ್ತಿತ್ವ ಪ್ರಶ್ನಿಸಿದವರಿಗೆ ಮತ ನೀಡುವಿರಾ ?
ಜಗಳೂರು : ತಾಲ್ಲೂಕಿನ ಸಂತೆಮುದ್ದಾಪುರ ಗ್ರಾಮದಲ್ಲಿ ಆಯೋಜಿಸಿದ್ದ ದ್ವಿತೀಯ ವರ್ಷದ ಹನುಮ ಜಯಂತಿ ಮಹೋತ್ಸವದಲ್ಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪಾಲ್ಗೊಂಡು ಸಂಜೀವಿನಿ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ದರ್ಶನ ಪಡೆದರು.
ಲವ್ ಜಿಹಾದ್ ಹತ್ತಿಕ್ಕಲು ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ
ಹೊನ್ನಾಳಿ : ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆಯನ್ನು ಖಂಡಿಸಿ ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.
ಕೃಷಿ ಪದವಿಗಳಿಗೆ ಹೆಚ್ಚಿನ ಪ್ರಾಮುಖ್ಯತೆ
ಪ್ರಸ್ತುತ ವೃತ್ತಿಪರ ಪದವಿಗಳಲ್ಲಿ ಕೃಷಿಗೆ ಸಂಬಂಧಿಸಿದ ಪದವಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿದೆ ಎಂದು ಕೆನರಾ ಬ್ಯಾಂಕ್ನ ವ್ಯವಸ್ಥಾಪಕ ಪ್ರದೀಪ್ ಪಾಟೀಲ್ ಹೇಳಿದರು.
ನೇಹಾ ಹತ್ಯೆ ಖಂಡಿಸಿ ಹರಿಹರದಲ್ಲಿ ಹಿಂದೂ ಜಾಗರಣಾ ವೇದಿಕೆ ಪ್ರತಿಭಟನೆ
ಹರಿಹರ : ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಅವರ ಹತ್ಯೆ ಖಂಡಿಸಿ ನಗರದಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ ನಡೆಸಿ, ತಹಶೀ ಲ್ದಾರ್ ಗುರು ಬಸವರಾಜ್ ಅವರಿಗೆ ಮನವಿ ಸಲ್ಲಿಸಿದರು.
ಬಸ್ಗಳಿಗೆ ಮತದಾರರ ಜಾಗೃತಿ ಸ್ಟಿಕ್ಕರ್ ಅಳವಡಿಕೆಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕರ್ನಾಟಕ ರಾಜ್ಯ ಸಾರಿಗೆ ಸಂಪರ್ಕ ನಿಗಮ ಇವರ ಸಹಯೋಗದಲ್ಲಿ ನಗರದ ಹೈಸ್ಕೂಲ್ ಮೈದಾನದಲ್ಲಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಬಸ್ಗಳಿಗೆ ಮತದಾನ ಜಾಗೃತಿ ಸ್ಟಿಕ್ಕರ್ ಅಳವಡಿಸುವ ಮೂಲಕ ಮತದಾನ ಜಾಗೃತಿಗೆ ಚಾಲನೆ ನೀಡಲಾಯಿತು.
ಹಳ್ಳಿಹಾಳ್ ಮಟ್ಟಿ ಕ್ಯಾಂಪ್ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಅರ್ಜಿ
ಮಲೇಬೆನ್ನೂರು : ಚುನಾವಣೆ ಬಹಿಷ್ಕಾರ ಮಾಡುವುದಾಗಿ ಹೇಳಿದ್ದ ಹಳ್ಳಿಹಾಳ್ ಮಟ್ಟಿ ಕ್ಯಾಂಪ್ ಗ್ರಾಮಸ್ಥರು ಮಂಗಳವಾರ ಅಧಿಕಾರಿಗಳ ಭರವಸೆಯ ಮೇರೆಗೆ ಮತದಾನ ಮಾಡುವ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಹೊನ್ನಾಳಿ : ಬಿರುಗಾಳಿ ಸಹಿತ ಸುರಿದ ಮಳೆ
ಹೊನ್ನಾಳಿ : ಬಿಸಿಲಿನ ಬೇಗೆಯಿಂದ ತತ್ತರಿಸಿ ಹೋಗಿದ್ದ ಜನತೆಗೆ ಸೋಮವಾರ ಸಂಜೆ ಸುರಿದ ಮಳೆ ತಂಪೆರೆಯಿತು. ಗುಡುಗು - ಸಿಡಿಲಿನ ಆರ್ಭಟ ಜೋರಾಗಿದ್ದಿತು.
ಹೊನ್ನಾಳಿ : ಅಕಾಲಿಕ ಮಳೆಗೆ 90 ಎಕರೆ ಬೆಳೆ ನಷ್ಟ
ಹೊನ್ನಾಳಿ : ಬಿರುಗಾಳಿ ಸಹಿತ ಸುರಿದ 2-3 ಮಳೆಗೆ ತಾಲ್ಲೂಕಿನ ಕೆಲವು ಗ್ರಾಮಗಳ ಪಪ್ಪಾಯ ಮತ್ತು ಬಾಳೆ ಬೆಳೆ ಹಾಳಾಗಿದೆ ಎಂದು ಹಿರಿಯ ತೋಟಗಾರಿಕಾ ಸಹಾಯಕ ನಿರ್ದೇಶಕರಾದ ಜಿ.ಪಿ. ರೇಖಾ ತಿಳಿಸಿದರು.
ಗ್ರಾಮದೇವತೆ ಹಬ್ಬದಲ್ಲಿ ಪ್ರಾಣಿ ಬಲಿ ನಿಲ್ಲಬೇಕು : ರಟ್ಟಿಹಳ್ಳಿ ಶ್ರೀ
ಮಲೇಬೆನ್ನೂರು : ಎಷ್ಟೇ ಬರಗಾಲವಿದ್ದರೂ ಜನರಲ್ಲಿ ಭಕ್ತಿಗೆ ಬರವಿಲ್ಲ ಎಂಬುದಕ್ಕೆ ಜಿಗಳಿ ಗ್ರಾಮಸ್ಥರು ಎರಡು ಹೊಸ ದೇವಸ್ಥಾನಗಳನ್ನು ಕಟ್ಟಿಸಿರುವುದೇ ಸಾಕ್ಷಿಯಾಗಿದೆ ಎಂದು ರಟ್ಟಿಹಳ್ಳಿ ಕಬ್ಬಿಣಕಂಥಿಮಠದ ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಮೆಚ್ಚುಗೆ ವ್ಯಕ್ತಪಡಿಸಿದರು.
ಶ್ರೀ ಕೋಟೆ ಆಂಜನೇಯ ಸ್ವಾಮಿ ತೇರು
ಹರಪನಹಳ್ಳಿ : ಪಟ್ಟಣದ ಶ್ರೀ ಕೋಟೆ ಆಂಜನೇಯ ಸ್ವಾಮಿ ರಥೋತ್ಸವ ಮಂಗಳವಾರ ಸಂಜೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವೈಭವದಿಂದ ಜರುಗಿತು.
ಕಣದಲ್ಲಿ ಉಳಿದ ವಿನಯ್
ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್ ಚುನಾವಣಾ ಕಣದಲ್ಲಿ ಉಳಿದಿದ್ದಾರೆ. ನಾಮಪತ್ರ ವಾಪಸ್ ಪಡೆಯಲಿದ್ದಾರೆ ಎಂದು ಕೆಲವರು ವದಂತಿ ಹಬ್ಬಿಸಿದ್ದರು. ಈ ವದಂತಿಗೆ ಈಗ ತೆರೆ ಬಿದ್ದಿದೆ. ಚುನಾವಣಾ ಕಣದಲ್ಲಿ ಗೆಲುವಿಗೆ ಸೆಣಸಾಡಲಿದ್ದಾರೆ.
17ನೇ ವಾರ್ಡಿನಲ್ಲಿ ಪ್ರಭಾ ಪರವಾಗಿ ಮಹಿಳಾ ಮುಖಂಡರಿಂದ ಮತಯಾಚನೆ
ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಪರವಾಗಿ ಶ್ರೀಮತಿ ಲತಿಕಾ ದಿನೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ವಾರ್ಡ್ ಅಧ್ಯಕ್ಷರಾದ ಗೀತಾ ಜಗದೀಶ್ ಅವರ ಅಧ್ಯಕ್ಷತೆಯಲ್ಲಿ ವಾರ್ಡ್ ಮುಖಂಡರಾದ ಜ್ಯೋತಿ ಅವರ ಸಮ್ಮುಖದಲ್ಲಿ ಮುದ್ದಳ್ಳಿ ತೋಟದ ಮಹಿಳೆಯರ ಜೊತೆ ಪೂರ್ವಭಾವಿ ಸಭೆಯನ್ನು ಇಂದು ನಡೆಸಲಾಯಿತು.
ಮಕ್ಕಳಲ್ಲಿ ಪರಿಸರದ ಜಾಗೃತಿ ಅಗತ್ಯ: ಗಾಯತ್ರಿ ಸಿದ್ದೇಶ್ವರ
ಪರಿಸರ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಕಾರ್ಯ ಪ್ರವೃತ್ತರಾಗಬೇಕು. ನಮ್ಮ ಮುಂದಿನ ಪೀಳಿಗೆಗೆ ಶುದ್ಧವಾದ ಗಾಳಿ, ನೀರು ಸಿಗಬೇಕು ಅಂದರೆ ಈಗಿನಿಂದಲೇ ಮಕ್ಕಳಿಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ, ಪರಿಸರ ಕೆಲಸದಲ್ಲಿ ಅವರನ್ನು ತೊಡಗಿಸಿಕೊಳ್ಳುವ ಕೆಲಸ ಆಗಬೇಕು
ಉಕ್ಕಡಗಾತ್ರಿಯಲ್ಲಿ ಆಲಿಕಲ್ಲು ಮಳೆ
ಉಕ್ಕಡಗಾತ್ರಿ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಸೋಮವಾರ ಸಂಜೆ ಬಿರುಗಾಳಿ ಗುಡುಗು, ಸಿಡಿಲು ಸಹಿತ ಆಲಿಕಲ್ಲು ಮಳೆ ಸುರಿದಿದೆ.
ವಾಯುವಿಹಾರ ಬಳಗದಿಂದ ಮಜ್ಜಿಗೆ
ನಗರದ ವಿಕಾಸ ತರಂಗಿಣಿ ವತಿಯಿಂದ ಮಹಾನಗರ ಪಾಲಿಕೆ ಆವರಣದಲ್ಲಿ ನಡೆಯುತ್ತಿರುವ 29ನೇ ವರ್ಷದ ಮಜ್ಜಿಗೆ ವಿತರಣೆ ಕಾರ್ಯಕ್ರಮದಲ್ಲಿ ಶಿವಯೋಗ ಮಂದಿರ ವಾಯುವಿಹಾರ ಬಳಗದವರು ಮಜ್ಜಿಗೆ ವಿತರಿಸಿದರು.
ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿ ಮಾಡಲು ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು
ಹರಪನಹಳ್ಳಿ : ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಬಿಜೆಪಿ ಕಾರ್ಯಕರ್ತರು ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕೆಂದು ವಿಜಯನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ್ ತಿಳಿಸಿದರು.
70 ವರ್ಷಗಳಲ್ಲಿ ಆಗದ ಕೆಲಸಗಳನ್ನು ಮೋದೀಜಿ 10 ವರ್ಷಗಳಲ್ಲಿ ಮಾಡಿ ತೋರಿಸಿದ್ದಾರೆ
ಮಲೇಬೆನ್ನೂರು : ಸರಿಯಾದ ನಾಯಕತ್ವದಿಂದ ಒಂದು ದೇಶ ಪ್ರಗತಿ ಸಾಧಿಸಲು ಸಾಧ್ಯ. ಅಂತಹ ನಾಯಕ ನರೇಂದ್ರ ಮೋದಿ ಅವರಿಂದಾಗಿ ಭಾರತ ವಿಕಸಿತಗೊಂಡಿದೆ ಎಂದು ಯುವ ವಾಗ್ಮಿ ಹಾರಿಕಾ ಮಂಜುನಾಥ್ ಹೇಳಿದರು.
ಜಿಲ್ಲಾ ಚುನಾವಣಾ ಮತದಾರರ ಜಾಗೃತಿ ಚಿಹ್ನೆಯಾಗಿ ಅಪರೂಪದ ತಳಿ ಬಯಲು ಸೀಮೆಯ `ಕೊಂಡುಕುರಿ’
18ನೇ ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಬೇಕೆಂದು ಜಿಂಕೆಯ ತದ್ರೂಪ ಹೊಂದಿರುವ ಬಯಲು ಸೀಮೆಯ ಕೊಂಡುಕುರಿ ರಂಗಯ್ಯನದುರ್ಗ ಅರಣ್ಯದಲ್ಲಿ ಸಿಗುವ ನಗುಮೊಗದ ಪ್ರಾಣಿ ಕೊಂಡುಕುರಿ ರಂಗ ಈ ಬಾರಿಯ ಚುನಾವಣಾ ಜಾಗೃತಿಗೆ ಮ್ಯಾಸ್ಕಟ್ ಆಗಿ ಬಳಕೆ ಮಾಡಲಾಗಿದೆ.
ಲೋಕಸಭಾ ಚುನಾವಣೆ : ಪ್ರತಿ ಅಭ್ಯರ್ಥಿಗೆ 95 ಲಕ್ಷದವರೆಗೆ ಖರ್ಚು-ವೆಚ್ಚ ಮಾಡಲು ಅವಕಾಶ
ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಚುನಾವಣಾ ಅಂತಿಮ ಕಣದಲ್ಲಿನ ಅಭ್ಯರ್ಥಿಗಳು ಚುನಾವಣಾ ಲೆಕ್ಕವನ್ನು ದಿನನಿತ್ಯ ನಿರ್ವಹಣೆ ಮಾಡಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ತಿಳಿಸಿದರು.
ಭಾರತ್ ಕಾಲೋನಿಯಲ್ಲಿ ಆರೈಕೆ ಆಸ್ಪತ್ರೆಯಿಂದ ಆರೋಗ್ಯ ಶಿಬಿರ
ನಗರದ ಆರೈಕೆ ಸೂಪರ್ ಸ್ಪೆಷಾಲಿಟಿ ಹಾಸ್ಪಿಟಲ್ ಹಾಗೂ ಪ್ರೀತಿ ಆರೈಕೆ ಟ್ರಸ್ಟ್ ಇವರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನಗರದ ಭಾರತ್ ಕಾಲೋನಿ ಪಂಚಮುಖಿ ದೇವಸ್ಥಾನ ಬಳಿ ಆಯೋಜಿಸಲಾಗಿತ್ತು