ಜಿಲ್ಲೆಯ ವಿವಿಧ ಶ್ರೀರಾಮ ಮಂದಿರಗಳಲ್ಲಿ ಬುಧವಾರ ಶ್ರೀರಾಮ ನವಮಿಯನ್ನು ಸಡಗರ, ಸಂಭ್ರಮ ದಿಂದ ಆಚರಿಸಲಾಯಿತು. ರಾಮನವಮಿ ಪ್ರಯುಕ್ತ ದೇವಸ್ಥಾನಗಳಲ್ಲಿ ವಿಶೇಷ ಪೂಜೆ-ಹೋಮ-ಹವನ, ತೊಟ್ಟಿಲೋತ್ಸವ, ಭಜನೆ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ದೇಶದ ಉದ್ಧಾರಕ್ಕೆ ಬಿಜೆಪಿ ಪಕ್ಷ ಗೆಲ್ಲಿಸಬೇಕು
ಹರಪನಹಳ್ಳಿ : ನರೇಂದ್ರ ಮೋದಿ ಯವರು ಮತ್ತೊಮ್ಮೆ ದೇಶದ ಪ್ರಧಾನಿ ಆಗಬೇಕು. ದೇಶದ ಉದ್ಧಾರಕ್ಕಾಗಿ ಬಿಜೆಪಿಯನ್ನು ಗೆಲ್ಲಿಸಬೇಕು ಎಂದು ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಮನವಿ ಮಾಡಿದರು.
ಕೆರೆಗಳಲ್ಲಿ ವರ್ಷವಿಡೀ ನೀರಿನ ಲಭ್ಯತೆಗೆ ಕ್ರಮ
ಮಾಯಕೊಂಡ : ತುಂಗಭದ್ರಾ ನದಿಯಿಂದ ದಾವಣಗೆರೆ ಮತ್ತು ಜಗಳೂರು ತಾಲ್ಲೂಕಿನ ಕೆರೆಗಳನ್ನು ತುಂಬಿಸುವ ಯೋಜನೆಯನ್ನು ಇನ್ನಷ್ಟು ಬಲಗೊಳಿಸಿ ವರ್ಷವಿಡೀ ಕೆರೆಗಳಲ್ಲಿ ನೀರಿನ ಲಭ್ಯತೆ ಇರುವಂತೆ ನೋಡಿಕೊಳ್ಳಬೇಕಾಗಿದೆ
ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾರಿಗೆ ಪರಿಶಿಷ್ಟ – ಹಿಂದುಳಿದ ಜಾತಿ ಮಠಗಳ ಆಶೀರ್ವಾದ
ಚಿತ್ರದುರ್ಗ : ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರ ಪರವಾಗಿ ಆಶೀರ್ವಾದ ಅಪೇಕ್ಷಿಸಿ ಚಿತ್ರದುರ್ಗದ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠ ಹಾಗೂ ಶಿವಶರಣ ಮಾದಾರ ಚನ್ನಯ್ಯ ಗುರುಪೀಠಕ್ಕೆ ಇಂದು ಭೇಟಿ ನೀಡಿದ್ದರು.
ನಾಮಪತ್ರ ವಾಪಸ್ಸಿಲ್ಲ, ಗೆಲುವು ನಿಶ್ಚಿತ
ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವುದಕ್ಕೆ ಅಪಾರ ಬೆಂಬಲ ವ್ಯಕ್ತವಾಗುತ್ತಿದೆ. ಯಾವ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯುವುದಿಲ್ಲ. ಈ ಬಾರಿ ನನ್ನ ಗೆಲುವು ನಿಶ್ಚಿತ ಎಂದು ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯ್ ಕುಮಾರ್ ತಿಳಿಸಿದ್ದಾರೆ.
ನೇಹಾ ಹತ್ಯೆ : ಜಂಗಮ ಸಮಾಜ ಖಂಡನೆ
ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನಯ್ಯ ಹಿರೇಮಠ ಅವರ ಪುತ್ರಿ ಕು. ನೇಹಾ ಅವರ ಹತ್ಯೆ ಯನ್ನು ಖಂಡಿಸಿರುವ ಜಿಲ್ಲಾ ಜಂಗಮ ಸಮಾಜ, ಆರೋಪಿ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಒತ್ತಾಯಿಸಿದೆ.
ನಗರದ ಎಂಬಿಎ ಕಾಲೇಜಿನಲ್ಲಿಂದು ಪದವಿ ದಿನ
ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಹೈಟೆಕ್ ಎಜುಕೇಷನ್ ಕಾಲೇಜಿನ ವಾಣಿಜ್ಯ ಇಲಾಖೆ ವತಿಯಿಂದ ಕಾಲೇಜಿನ ಎಂಬಿಎ ಆಡಿಟೋರಿಯಂನಲ್ಲಿ 2ನೇ ಪದವಿ ದಿನವನ್ನು ಇಂದು ಸಂಜೆ 4.30ಕ್ಕೆ ಹಮ್ಮಿಕೊಳ್ಳಲಾಗಿದೆ.
ದಾವಣಗೆರೆಗೆ 40 ಅಭ್ಯರ್ಥಿಗಳು, 54 ನಾಮಪತ್ರ
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದ ಶುಕ್ರವಾರ 14 ಅಭ್ಯರ್ಥಿಗಳಿಂದ 20 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.
ಹಾಡು ಹಗಲೇ ವಿದ್ಯಾರ್ಥಿನಿಯ ಬರ್ಬರ ಹತ್ಯೆ: ಆವರಗೊಳ್ಳ ಓಂಕಾರ ಶ್ರೀ ಖಂಡನೆ
ಹುಬ್ಬಳ್ಳಿಯ ನಗರ ಪಾಲಿಕೆ ಸದಸ್ಯ ನಿರಂಜನ್ ಹಿರೇಮಠ ಅವರ ಪುತ್ರಿ 24 ವರ್ಷದ ನೇಹಾ ಹಿರೇಮಠ ಅವರನ್ನು ಕಾಲೇಜಿನ ಆವರಣದಲ್ಲಿ ಹಾಡು ಹಗಲೇ ಬರ್ಬರವಾಗಿ ಹತ್ಯೆ ಮಾಡಿರುವುದು ಅತ್ಯಂತ ಖಂಡನೀಯ
ಅಖಿಲ ಭಾರತ ವಿಶ್ವಕರ್ಮ ಪರಿಷತ್ನಿಂದ ಕಾಂಗ್ರೆಸ್ಗೆ ಬೆಂಬಲ
ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಅಖಿಲ ಭಾರತ ವಿಶ್ವಕರ್ಮ ಪರಿಷತ್ ಬೆಂಬಲ ನೀಡಲಿದೆ ಎಂದು ರಾಷ್ಟ್ರೀಯ ಅಧ್ಯಕ್ಷ ಎಚ್.ವಿ.ಸತೀಶ್ ಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ ಸಿ.ಇ.ಟಿ. ಪರೀಕ್ಷೆ ಸುಸೂತ್ರ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವೃತ್ತಿಪರ ಕೋರ್ಸ್ಗಳಾದ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ಸಂಗೋಪನೆ, ಫಾರ್ಮಸಿ, ಬಿಎಸ್ಸಿ ನರ್ಸಿಂಗ್ ಸೇರಿದಂತೆ, ಇನ್ನಿತರೆ ಕೋರ್ಸ್ಗಳಿಗೆ 2024 ನೇ ಸಾಲಿಗೆ ಪ್ರವೇಶ ಪಡೆಯಲು ಇಂದು ಸಿಇಟಿ ಪರೀಕ್ಷೆ ಸುಸೂತ್ರವಾಗಿ ನಡೆದಿದೆ.
ನೇಹಾ ಹತ್ಯೆ : ನಸೀರ್ ಅಹ್ಮದ್ ಖಂಡನೆ
ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನಯ್ಯ ಹಿರೇಮಠ ಅವರ ಪುತ್ರಿ ಕು. ನೇಹಾ ಹಿರೇಮಠ ಅವರ ಹತ್ಯೆ ಪ್ರಕರಣವನ್ನು ಬಿಜೆಪಿ ಮುಖಂಡ ನಸೀರ್ ಅಹ್ಮದ್ ಖಂಡಿಸಿದ್ದಾರೆ.
ಬಿಸಿಲಿನ ತಾಪಕ್ಕೆ ಮಳೆಯ ಸಿಂಚನ ನೊಣವಿನಕೆರೆ ಶ್ರೀ ಸಂಕಲ್ಪದ ಪವಾಡ
ಮಳೆಯಿಲ್ಲದೆ ಬಿಸಿಲಿನ ತಾಪಕ್ಕೆ ಬೆಂದು ಹೋಗಿರುವ ನಗರದ ಜನತೆಗೆ ವರುಣ ಮೊನ್ನೆ ಮಳೆಯ ಸಿಂಚನದ ಸ್ಪರ್ಷ ಮಾಡಿದ್ದು, ಇದು ಅಜ್ಜಯ್ಯ ಮಾಡಿದ ಸಂಕಲ್ಪದ ಪವಾಡ ಎಂದು ಭಕ್ತರು ಬಣ್ಣಿಸಿದ್ದಾರೆ.
ಮಂಡಿಪೇಟೆ ಶ್ರೀ ಕೋದಂಡರಾಮ ದೇವಸ್ಥಾನದ ಹೆಬ್ಬಾಗಿಲು ಇಡುವ ಶಾಸ್ತ್ರ
ಇಲ್ಲಿನ ಮಂಡಿಪೇಟೆ ಶ್ರೀ ಕೋದಂಡರಾಮ ದೇವಸ್ಥಾನದ ಹೆಬ್ಬಾಗಿಲು ಇಡುವ ಶಾಸ್ತ್ರ, ಪೂಜೆಯನ್ನು ನೆರವೇರಿಸಲಾಯಿತು.
23ಕ್ಕೆ ಹಳೇಪೇಟೆ ಶ್ರೀ ವೀರಭದ್ರೇಶ್ವರ ರಥೋತ್ಸವ
ಹಳೇಪೇಟೆಯ ಶ್ರೀ ವೀರಭದ್ರೇಶ್ವರ ಸ್ವಾಮಿಯ ರಥೋತ್ಸವವು ನಾಡಿದ್ದು ದಿನಾಂಕ 21 ರ ಭಾನುವಾರದಿಂದ 24 ರವರೆಗೆ ನಡೆಯಲಿದೆ. ದಿನಾಂಕ 21 ರಂದು ಬೆಳಿಗ್ಗೆ 6 ಗಂಟೆಗೆ ರುದ್ರಾಭಿಷೇಕ ಮತ್ತು ಬೆಳಿಗ್ಗೆ 9 ಗಂಟೆಗೆ ರುದ್ರ ಸಂತರ್ಪಣೆ, ದಿನಾಂಕ 22 ರಂದು ಬೆಳಿಗ್ಗೆ 6 ಗಂಟೆಗೆ ಶ್ರೀ ವೀರಭದ್ರೇಶ್ವರ ಸ್ವಾಮಿಯ ಗುಗ್ಗಳ ಮತ್ತು ಅಗ್ನಿಕುಂಡ ಹಾಗೂ ಉತ್ಸವ ನಗರದ ರಾಜಬೀದಿಗಳಲ್ಲಿ ನಡೆಯುತ್ತದೆ.
ನಗರದಲ್ಲಿ ಇಂದು ಮಜ್ಜಿಗೆ ವಿತರಣೆ ಕಾರ್ಯಕ್ರಮ
ಕರುಣಾ ಜೀವ ಕಲ್ಯಾಣ ಟ್ರಸ್ಟ್ನಿಂದ ಒಂದು ತಿಂಗಳು ನಡೆಸುತ್ತಿರುವ ಮಜ್ಜಿಗೆ ವಿತರಣಾ ಕಾರ್ಯಕ್ರಮಕ್ಕೆ ಶ್ರೀಮತಿ ಶಕುಂತಲಾ ನಯನ ಅವರು ಇಂದಿನ ದಾನಿಗಳಾಗಿದ್ದಾರೆ.
ಜಿಲ್ಲೆಯ ಗಡಿಭಾಗದಲ್ಲಿನ ಮದ್ಯದಂಗಡಿ ಮುಚ್ಚಲು ಆದೇಶ
ಲೋಕಸಭಾ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು, ದೇಶದ ಎರಡನೇ ಹಂತ, ರಾಜ್ಯದಲ್ಲಿ ಮೊದಲ ಹಂತದಲ್ಲಿ ಜಿಲ್ಲೆಯ ಗಡಿ ಹೊಂದಿರುವ ಜಿಲ್ಲೆಗಳಾದ ಉಡುಪಿ-ಚಿಕ್ಕಮಗಳೂರು ಮತ್ತು ಚಿತ್ರದುರ್ಗ ಕ್ಷೇತ್ರಗಳಿಗೆ ಇದೇ ದಿನಾಂಕ 26 ರಂದು ಮತದಾನ ನಡೆಯುವುದರಿಂದ ಇದೇ ದಿನಾಂಕ24 ರಂದು ಸಂಜೆ 5 ರಿಂದ ಇದೇ ದಿನಾಂಕ 26ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟ ಮಾಡದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಆದೇಶಿಸಿದ್ದಾರೆ.
ಐದನೇ ದಿನ ಹತ್ತು ನಾಮಪತ್ರಗಳ ಸಲ್ಲಿಕೆ : ಡಿಸಿ
ನಾಮಪತ್ರ ಸಲ್ಲಿಕೆಗೆ ಐದನೇ ದಿನವಾದ ಗುರುವಾರ 10 ಅಭ್ಯರ್ಥಿಗಳಿಂದ 10 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.
ಇಂದು `ಚಿರತೆ ಬಂತು ಚಿರತೆ’ ಚಿತ್ರ ತೆರೆಗೆ
`ಚಿರತೆ ಬಂತು ಚಿರತೆ' ಚಲನಚಿತ್ರ ಇಂದು ರಾಜ್ಯಾ ದ್ಯಂತ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕ ಜಗದೀಶ್ ಮಲ್ನಾಡ್ ಹಾಗೂ `ದವನ ಸಿನಿಪ್ರಿಯ' ಸಮೂಹದ ಅರುಣ್ ಕುಮಾರ್ ಆರ್.ಟಿ. ತಿಳಿಸಿದ್ದಾರೆ.
ಶ್ರೀ ಬೀರಲಿಂಗೇಶ್ವರ ಕಾಲೇಜಿಗೆ ಶೇ.92
ಶ್ರೀ ಬೀರಲಿಂಗೇಶ್ವರ ಪದವಿ ಪೂರ್ವ ಕಾಲೇಜಿಗೆ ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.92ರ ಫಲಿತಾಂಶ ಲಭಿಸಿದೆ.
ನಗರದಲ್ಲಿ ಇಂದು ಮಜ್ಜಿಗೆ ವಿತರಣೆ
ಕರುಣಾ ಜೀವ ಕಲ್ಯಾಣ ಟ್ರಸ್ಟ್ನಿಂದ ಒಂದು ತಿಂಗಳು ನಡೆಸುತ್ತಿರುವ ಮಜ್ಜಿಗೆ ವಿತರಣಾ ಕಾರ್ಯಕ್ರಮಕ್ಕೆ ಡಾ.ಜಾಧವ್ ಡೇ ಕೇರ್, ಬೇತೂರು ಮರಡಿ ರೇವಣಸಿದ್ದಪ್ಪ ಅವರು ಇಂದಿನ ದಾನಿಗಳಾಗಿದ್ದಾರೆ.
ಹಿರೇಎಮ್ಮಿಗನೂರಿಲ್ಲಿ ಇಂದು ಶ್ರೀ ಕಲ್ಲೇಶ್ವರ ಸ್ವಾಮಿ ರಥೋತ್ಸವ
ಹೊಳಲ್ಕೆರೆ ತಾಲ್ಲೂಕಿನ ಹಿರೇಎಮ್ಮಿಗನೂರು ಗ್ರಾಮದ ಶ್ರೀ ಕಲ್ಲೇಶ್ವರ ಸ್ವಾಮಿ ರಥೋತ್ಸವವು ಇಂದು ಸಂಜೆ 5 ಗಂಟೆಗೆ ನಡೆಯಲಿದೆ. ರಥೋತ್ಸವದ ನಂತರ ಓಕುಳಿ ಏರ್ಪಾಡಾಗಿದೆ. ಹಿರೇಎಮ್ಮಿಗನೂರಿನ ಶ್ರೀ ಕಲ್ಲೇಶ್ವರ ವೀರಗಾಸೆ ಸಂಘದಿಂದ ವೀರಗಾಸೆ ಕುಣಿತ ನಡೆಯಲಿದೆ.
ಬಿಜೆಪಿ ವೃತ್ತಿಪರರ ಪ್ರಕೋಷ್ಟದ ಸಮಿತಿ ಸದಸ್ಯರಾಗಿ ಜಯಪ್ರಕಾಶ್
ಬಿಜೆಪಿ ವೃತ್ತಿಪರರ ಪ್ರಕೋಷ್ಠದ ರಾಜ್ಯ ಸಮಿತಿಯ ಸದಸ್ಯರನ್ನಾಗಿ ಕೊಂಡಜ್ಜಿ ಜಯಪ್ರಕಾಶ್ ಅವರನ್ನು ರಾಜ್ಯ ಸಂಚಾಲಕ ಕಿರಣ್ ಕುಮಾರ್ ಅಣ್ಣೀಗೆೆರೆ ನೇಮಕ ಮಾಡಿ ಆದೇಶಿಸಿದ್ದಾರೆ.
ಆರ್.ಎಸ್. ಹರ್ಷಿತಾ ಜಿಲ್ಲೆಗೆ ಪ್ರಥಮ
ರಾಣೇಬೆನ್ನೂರು : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಖನ್ನೂರ ವಿದ್ಯಾನಿಕೇತನ ಕಾಲೇಜಿಗೆ ಶೇ.90.50 ಫಲಿತಾಂಶ ಬಂದಿದೆ.
ಕಕ್ಕರಗೊಳ್ಳ ಸರ್ಕಾರಿ ಪಿಯು ಕಾಲೇಜಿಗೆ ಶೇ.85.62 ಫಲಿತಾಂಶ
ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಲ್ಲೂಕಿನ ಕಕ್ಕರಗೊಳ್ಳ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.85.62 ಫಲಿತಾಂಶ ಲಭಿಸಿದೆ. ವಿಜ್ಞಾನ ವಿಭಾಗದ ಜಿ.ಎ. ಕಾವ್ಯ 559 ಅಂಕ, ವಾಣಿಜ್ಯ ವಿಭಾಗದ ಎನ್.ಡಿ. ದೀಪಾ 571 ಅಂಕ, ಕಲಾ ವಿಭಾಗದ ಟಿ. ಅನುಷಾ 535 ಅಂಕಗಳನ್ನು ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಇಂದು ಬೃಹತ್ ರೋಡ್ ಶೋ ಮೂಲಕ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ
ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರು ನಾಳೆ ದಿನಾಂಕ 19ರಂದು ನಗರದಲ್ಲಿ ಬೃಹತ್ ರೋಡ್ ಶೋ ನಡೆಸಿ, ಎರಡನೇ ಬಾರಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್. ರಾಜಶೇಖರ್ ತಿಳಿಸಿದ್ದಾರೆ.
ಖಾಸಗಿ ಆಸ್ಪತ್ರೆ ವೈದ್ಯರ ಸೇವಾ ನ್ಯೂನತೆ, ಜಿಲ್ಲಾ ಗ್ರಾಹಕರ ನ್ಯಾಯಾಲಯದಿಂದ ಪರಿಹಾರ ನೀಡಲು ಆದೇಶ
ನಗರದ ಖಾಸಗಿ ಆಸ್ಪತ್ರೆಯ ವೈದ್ಯರು ದೋಷ ಪೂರಿತ ವೈದ್ಯಕೀಯ ಸೇವೆಗೆ ಪರಿಹಾರವಾಗಿ ನಷ್ಟ ಅನುಭವಿಸಿದ ರೋಗಿಗೆ ರೂ.4,36,626 ಪರಿಹಾರ ಹಾಗೂ ಮಾನಸಿಕ ವೇದನೆ, ಪ್ರಕರಣದ ಖರ್ಚಾಗಿ ರೂ.60 ಸಾವಿರ ಭರಿಸುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ.
ಕೊಟ್ಟೂರಿನಲ್ಲಿ ಸಿಡಿಲಿಗೆ 3 ಆಕಳು ಬಲಿ
ಕೊಟ್ಟೂರು : ತಾಲ್ಲೂಕಿನ ಹರಾಳು ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ಮಳೆ ಬರುವಾಗ ಸಿಡಿಲು ಬಡಿದು ಅಂಬಳಿ ಪ್ರಕಾಶಪ್ಪ ತಂದೆ ಅಂಬಳಿ ಗೋಣೆಪ್ಪ ಇವರಿಗೆ ಸೇರಿದ 3 ಆಕಳು ಮೇಯಲು ಕಟ್ಟಿದ್ದ ಸ್ಥಳದಲ್ಲಿಯೇ ಸಾವನ್ನಪ್ಪಿವೆ.
ಕುಂಬಳೂರಿನಲ್ಲಿ ಸಿಡಿಲ ಹೊಡೆತಕ್ಕೆ ಆಕಳು ಬಲಿ
ಮಲೇಬೆನ್ನೂರು : ಗುರುವಾರ ಸಂಜೆ ಸಿಡಿಲು ಬಡಿದು ಗರ್ಭವಿದ್ದ ಆಕಳು ಸಾವನ್ನಪ್ಪಿರುವ ಘಟನೆ ಕುಂಬಳೂರಿನಲ್ಲಿ ನಡೆದಿದೆ. ಗ್ರಾಮದ ಮಾಗಾನಹಳ್ಳಿ ಹಾಲಪ್ಪ ಅವರ ದನದ ಕೊಟ್ಟಿಗೆಯಲ್ಲಿ ಈ ಘಟನೆಯಾಗಿದೆ.
ಕೊಟ್ಟೂರೇಶ್ವರ ಸ್ವಾಮಿಯ ಹುಂಡಿ ಪೆಟ್ಟಿಗೆ ಎಣಿಕೆ ಮೊತ್ತ ರೂ. 47,90,920
ಕೊಟ್ಟೂರು : ಪಟ್ಟಣದ ಆರಾಧ್ಯ ದೈವ, ಪವಾಡ ಪುರುಷ ಎಂದೇ ಪ್ರಖ್ಯಾತವಾಗಿರುವ ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿಯ ಹುಂಡಿ ಪೆಟ್ಟಿಗೆ ಎಣಿಕೆ ದೇವಸ್ಥಾನದ ಹಿಂಭಾಗದಲ್ಲಿ ಇರುವ ಸಭಾಂಗಣದಲ್ಲಿ ಪ್ರಾರಂಭಿಸಲಾ ಯಿತು.
ಯುಪಿಎಸ್ಸಿ ರ್ಯಾಂಕ್ ವಿದ್ಯಾರ್ಥಿಗೆ ಸಿದ್ದೇಶ್ವರ ಅಭಿನಂದನೆ
ಯುಪಿಎಸ್ಸಿ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 101ನೇ ರಾಂಕ್ ಪಡೆದು, ಕರ್ನಾಟಕ್ಕೆ 2ನೇ ರ್ಯಾಂಕ್ ಪಡೆದಿರುವ ನಗರದ ಸೌಭಾಗ್ಯ ಬೀಳಗಿಮಠ ಅವರನ್ನು ಸಂಸದ ಜಿ.ಎಂ.ಸಿದ್ದೇಶ್ವರ ಅವರು ಸನ್ಮಾನಿಸಿ, ಗೌರವಿಸಿದರು.
ಸೌಭಾಗ್ಯ ಬೀಳಗಿಮಠಗೆ ರ್ಯಾಂಕ್ ಡಾ. ಪ್ರಭಾ ಮಲ್ಲಿಕಾರ್ಜುನ್ ಸನ್ಮಾನ
ಯುಪಿಎಸ್ಸಿ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 101ನೇ ರ್ಯಾಂಕ್ ಪಡೆದು, ಕರ್ನಾಟಕಕ್ಕೆ 2ನೇ ರ್ಯಾಂಕ್ ಪಡೆದಿರುವ ನಗರದ ಸೌಭಾಗ್ಯ ಬೀಳಗಿಮಠ ಅವರ ನಿವಾಸಕ್ಕೆ ಎಸ್.ಎಸ್. ಕೇರ್ ಟ್ರಸ್ಟ್ ಟ್ರಸ್ಟಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ತೆರಳಿ ಅಭಿನಂದಿಸಿದರು.
ಜ್ಯೂ. ಮೋದಿ ಶೋಷಿತರ ನಾಯಕನ ಮನೆಗೆ ಬಿಜೆಪಿ ಪ್ರಚಾರ
ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರ ನಾಮಪತ್ರ ಸಲ್ಲಿಸುವ ಬೃಹತ್ ಮೆರವಣಿಗೆಯಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಿದ್ದ ಉಡುಪಿ ಜಿಲ್ಲೆಯ ಹಿರಿಯಡ್ಕ ಗ್ರಾಮದ ಸದಾಶಿವನಾಯ್ಕ ಅವರು ಜ್ಯೂನಿಯರ್ ಮೋದಿ ಎಂದೇ ಹೆಸರಾಗಿದ್ದು, ಶೋಷಿತರ ವರ್ಗಗಳ ನಾಯಕ ಬಾಡದ ಆನಂದರಾಜ್ ನಿವಾಸಕ್ಕೆ ಇಂದು ದಿಢೀರ್ ಭೇಟಿ ನೀಡಿದ್ದರು.
ಬಿಜೆಪಿ, ಅದರ ಮಿತ್ರ ಪಕ್ಷಗಳನ್ನು ಸೋಲಿಸಲು ಸಿಐಟಿಯು ಕರೆ
ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳನ್ನು ಸೋಲಿಸುವಂತೆ ಕಾರ್ಮಿಕ ವರ್ಗಕ್ಕೆ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಕರೆ ನೀಡಿದೆ.
ಕೊಕ್ಕನೂರು ಹನುಮಪ್ಪನಿಗೆ ಭಕ್ತರಿಂದ ನೋಟಿನ ಹಾರ
ಮಲೇಬೆನ್ನೂರು : ಮಳೆ - ಬೆಳೆ ಇಲ್ಲದೇ ಬರಗಾಲ ಎದುರಿಸುತ್ತಿರುವ ಕೊಕ್ಕನೂರಿನ ಗ್ರಾಮಸ್ಥರು ತಮ್ಮ ನೆಚ್ಚಿನ ಹನುಮಪ್ಪನಿಗೆ ನೋಟಿನ ಹಾರಗಳನ್ನು ಹಾಕುವ ಮೂಲಕ ಭಕ್ತಿಗೆ ಬರವಿಲ್ಲ ಎಂಬುದನ್ನು ಶುಕ್ರವಾರ ಸಾಬೀತು ಮಾಡಿದ್ದಾರೆ.
ಹರಪನಹಳ್ಳಿ ತಾ.ನಲ್ಲಿ ನರೇಗಾ ಕಾಮಗಾರಿಗಳನ್ನು ಪರಿಶೀಲಿಸಿದ ನರೇಗಾ ಕಮೀಷನರ್
ಹರಪನಹಳ್ಳಿ: ತಾಲ್ಲೂಕಿನಲ್ಲಿ ನರೇಗಾದಡಿ ಕೈಗೆತ್ತಿಕೊಂಡ ಕಾಮಗಾರಿ ಗಳನ್ನು ಉತ್ತಮವಾಗಿ ನಿರ್ಮಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆಯ ಆಯುಕ್ತ ಪವನ್ ಕುಮಾರ್ ಮಾಲಪಾಟಿ ಹೇಳಿದರು.
ಕೊಕ್ಕನೂರು : ವೈಭವದ ರಥೋತ್ಸವ
ಮಲೇಬೆನ್ನೂರು : ಸುಕ್ಷೇತ್ರ ಕೊಕ್ಕನೂರು ಗ್ರಾಮದ ಆರಾಧ್ಯ ದೈವ ಶ್ರೀ ಆಂಜನೇಯ ಸ್ವಾಮಿಯ ಮಹಾರಥೋತ್ಸವವು ಗುರುವಾರ ಬೆಳಗಿನ ಜಾವ ಅಪಾರ ಭಕ್ತರ ಸಮ್ಮುಖದಲ್ಲಿ ವೈಭವದೊಂದಿಗೆ ಜರುಗಿತು.
ಅಂಬೇಡ್ಕರ್ ತತ್ವಾದರ್ಶಗಳನ್ನು ನಾವೆಲ್ಲರೂ ಅಳಡಿಸಿಕೊಳ್ಳಬೇಕು
ಜಗಳೂರು : ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ಸರ್ವರಿಗೂ ಸಮಪಾಲು, ಸಮಬಾಳು ತತ್ವದಡಿ ಸೌಲಭ್ಯಗಳು ದೊರೆಯುವಂತಾಗಿದೆ. ಅಂಬೇಡ್ಕರ್ರವರ ತತ್ವಾದರ್ಶಗಳನ್ನು ನಾವೆಲ್ಲರೂ ಸಹ ಅಳಡಿಸಿಕೊಳ್ಳಬೇಕಾಗಿದೆ ಎಂದು ಶಾಸಕ ಬಿ.ದೇವೇಂದ್ರಪ್ಪ ತಿಳಿಸಿದರು.
ಸೊಕ್ಕೆ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ಧೇಶ್ವರ ಭೇಟಿ
ಜಗಳೂರು : ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮತಿ ಗಾಯತ್ರಿ ಸಿದ್ದೇಶ್ವರ ಸೊಕ್ಕೆ ಗ್ರಾಮದ ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಬಾಬಾರವರ ಆಶೀರ್ವಾದ ಪಡೆದರು.
ಹರಿಹರ ತಾ. ಹಲವು ಗ್ರಾಮಗಳಲ್ಲಿ ಮಳೆ, ಗಾಳಿ
ಹರಿಹರ ನಗರ ಸೇರಿದಂತೆ ತಾಲ್ಲೂಕಿನ ಗುತ್ತೂರು, ಕೊಂಡಜ್ಜಿ, ಗಂಗನಹರಸಿ, ನಾಗೇನಹಳ್ಳಿ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಮುಂಗಾರು ಮಳೆ ಗಾಳಿ ರಭಸವು ಹೆಚ್ಚಿನ ಪ್ರಮಾಣದಲ್ಲಿ ಆಗಿದ್ದರಿಂದ, ಹಲವು ಗ್ರಾಮಗಳಲ್ಲಿ ವಿದ್ಯುತ್ ಕಂಬಗಳು ಮತ್ತು ಅನೇಕ ಮರಗಳು ನೆಲಕ್ಕೆ ಉರುಳಿ ಬಿದ್ದಿದ್ದು , ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿತ್ತು.
ಬತ್ತಿ ಬರಿದಾದ ಕೊಂಡಜ್ಜಿ ಕೆರೆ…
ಹರಿಹರ ತಾಲ್ಲೂಕಿನ ಕೊಂಡಜ್ಜಿ ಗ್ರಾಮದ ಪ್ರವಾಸಿ ತಾಣವಾಗಿರುವ ದೊಡ್ಡ ಕೆರೆ ನೀರಿಲ್ಲದೇ ಬತ್ತಿ ಬರಿದಾಗಿದ್ದು, ಜನ - ಜಾನುವಾರಗಳಿಗೆ, ಪ್ರಾಣಿ - ಪಕ್ಷಿಗಳಿಗೆ ಸಂಕಷ್ಟ ಎದುರಾಗಿದೆ. ತುಂಗಭದ್ರಾ ನದಿಯಿಂದ ಕೊಂಡಜ್ಜಿ ಕೆರೆಗೆ ನೀರು ತುಂಬಿಸುವ ಯೋಜನೆ ಜಾರಿಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ರ್ಯಾಂಕ್ ವಿಜೇತ ಸೌಭಾಗ್ಯ ಬೀಳಗಿ ಮಠ್ ಮಕ್ಕಳಿಗೆ ಸ್ಫೂರ್ತಿ
ಒಂದರಿಂದ ಎಸ್ಸೆಸ್ಸೆಲ್ಸಿ ಎಂಬುದು ಒಂದು ಕಟ್ಟಡದ ಭದ್ರ ಅಡಿಪಾಯ ಇದ್ದಂತೆ. ಆದ್ದರಿಂದ ಮಕ್ಕಳಿಗೆ ಪ್ರಾಥಮಿಕ, ಪ್ರೌಢ ಶಿಕ್ಷಣ ಬಹಳ ಮುಖ್ಯ ಎಂದು ಬಿಜೆಎಂ ಶಾಲೆ ಕಾರ್ಯದರ್ಶಿ ಮಂಜುನಾಥ ಅಗಡಿ ಹೇಳಿದರು.
ಸಂಭ್ರಮದ ಶ್ರೀ ಕಾಳಿಕಾದೇವಿ ರಥೋತ್ಸವ
ಹರಿಹರ : ನಗರದಲ್ಲಿ ಶ್ರೀ ಕಾಳಿಕಾದೇವಿ ರಥೋತ್ಸವ ಶ್ರದ್ಧಾ - ಭಕ್ತಿ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸಹಸ್ರಾ ರ್ಜುನ ವೃತ್ತದಲ್ಲಿರುವ ಕಾಳಿಕಾದೇವಿ ದೇವಸ್ಥಾನದಲ್ಲಿ ದೇವಿಗೆ ಅಭಿಷೇಕ, ಅಲಂಕಾರ, ಮಹಾಮಂಗಳಾರತಿ ನಡೆದು, ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
ರಾಣೇಬೆನ್ನೂರು : ನೇಕಾರರು ಸಂಘಟಿತರಾಗಲು ಕೇಲಗಾರ ಕರೆ
ರಾಣೇಬೆನ್ನೂರು : ನೇಕಾರರು ಶಿಕ್ಷಣ ಮತ್ತು ಸಂಘಟನೆಗೆ ಆದ್ಯತೆ ನೀಡುವುದರ ಜೊತೆಗೆ ಎಲ್ಲಾ ಒಳಪಂಗಡಗಳು ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಜಿಲ್ಲಾ ನೇಕಾರ ಒಕ್ಕೂಟದ ಗೌರವ ಅಧ್ಯಕ್ಷ ಡಾ. ಬಸವರಾಜ ಕೇಲಗಾರ ಹೇಳಿದರು.
ಪಕ್ಷೇತರ ಅಭ್ಯರ್ಥಿ ವಿನಯ್ ಪರ ಪ್ರಚಾರ
ನಗರದ ಕೆಬಿ ಬಡಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್ ಪರ ಕಕ್ಕರಗೊಳ್ಳದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ, ತಾಲ್ಲೂಕು ಸ್ತ್ರೀಶಕ್ತಿ ಸಂಘಗಳ ಒಕ್ಕೂಟದ ಅಧ್ಯಕ್ಷೆ ಶಕುಂತಲಾ ಅವರ ನೇತೃತ್ವದಲ್ಲಿ ಬಿರುಸಿನ ಪ್ರಚಾರ ನಡೆಸಿದರು.
ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆ ಶೀಘ್ರ ಪೂರ್ಣ
ಚನ್ನಗಿರಿ ತಾಲ್ಲೂಕಿನ ಕೆರೆಗಳು ಸೇರಿದಂತೆ ಒಟ್ಟು 124 ಕೆರೆಗಳನ್ನು ತುಂಬಿಸುವ ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ|| ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.
ಕಾಂಗ್ರೆಸ್ ಪರವಾಗಿ ಜೈನ್, ಪಟೇದಾರ್, ವಿಷ್ಣು ಸಮಾಜದ ಸಭೆ
ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಡಾ|| ಪ್ರಭಾ ಮಲ್ಲಿಕಾರ್ಜುನ್ ಪರ ರಾಜ್ ರೆಸಿಡೆನ್ಸಿಯಲ್ಲಿ ಜೈನ, ಪಟೇದಾರ್ ಮತ್ತು ವಿಷ್ಣು ಸಮಾಜದವರ ಸಭೆ ಕಳೆದ ವಾರ ನಡೆಯಿತು.
ಮಾಯಕೊಂಡ : ಸಿಡಿಲಿನಿಂದ 25 ಮೇಕೆಗಳು ಸಾವು
ಮಾಯಕೊಂಡ : ಸಿಡಿಲು ಬಡಿದು 25 ಮೇಕೆಗಳು ಸಾವನ್ನಪ್ಪಿದ ಘಟನೆ ಸಮೀಪದ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಈಚಘಟ್ಟ ಗ್ರಾಮದಲ್ಲಿ ಗುರುವಾರ ನಡೆದಿದೆ.
ಹರಪನಹಳ್ಳಿ : ಮಿನಿ ವಿಧಾನಸೌಧದಲ್ಲಿ ಅಂಬೇಡ್ಕರ್ ಜಯಂತಿ
ಹರಪನಹಳ್ಳಿ : ಪಟ್ಟಣದ ಮಿನಿ ವಿಧಾನಸೌ ಧದಲ್ಲಿ ತಾಲ್ಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರ 133ನೇ ಜಯಂತಿ ಆಚರಿಸಲಾಯಿತು.
ಜೋರು ಮಳೆಗೆ: ರಸ್ತೆಗೆ ಉರುಳಿದ ಮರ
ಹರಪನಹಳ್ಳಿ : ಪಟ್ಟಣ ಹಾಗೂ ತಾಲ್ಲೂಕು ವ್ಯಾಪ್ತಿಯಲ್ಲಿ ಗುರುವಾರ ಸಂಜೆ ಜೋರಾಗಿ ಬೀಸಿದ ಗಾಳಿ- ಮಳೆಗೆ ಮರಗಳು ರಸ್ತೆಗೆ ಉರುಳಿದ ಘಟನೆ ಸಂಭವಿಸಿದೆ.
ಹರಳಹಳ್ಳಿಯಲ್ಲಿ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ
ಹರಿಹರ : ನಗರದ ಹೊರವಲಯದ ಹರಳಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವದ ಮುಳ್ಳು ಗದ್ದಿಗೆ ಉತ್ಸವಕ್ಕೆ ಟ್ರ್ಯಾಕ್ಟರ್ನಲ್ಲಿ ಮುಳ್ಳು ತೆಗೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲಿ ಟ್ರ್ಯಾಕ್ಟರ್ ಸ್ಟೇರಿಂಗ್ ಕಟ್ ಆಗಿದ್ದರಿಂದ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿ ಆದ ಪರಿಣಾಮ ಟ್ರ್ಯಾಕ್ಟರ್ ನಲ್ಲಿದ್ದ ಹಲವು ಯುವಕರಿಗೆ ಗಾಯಗಳಾಗಿದೆ.
ದೇಶ ರೂಪಿಸುವಲ್ಲಿ ಅಂಬೇಡ್ಕರ್ ಕೊಡುಗೆ ಅಪಾರ
ರಾಣೇಬೆನ್ನೂರು : ದೇಶದ ಭವಿಷ್ಯ ರೂಪಿಸುವಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆ ಅಪಾರವಾಗಿದೆ. ಅವರ ಆದರ್ಶ ತತ್ವಗಳನ್ನು ಸರ್ವರೂ ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆದಾಗ ಅಂಬೇಡ್ಕರ್ ಅವರ ಜಯಂತಿ ಆಚರಿಸಿದ್ದಕ್ಕೂ ಸಾರ್ಥಕವಾಗುತ್ತದೆ
ಹಳೇಬಾತಿ : ಆಂಜನೇಯ ಸ್ವಾಮಿ ರಥ
ಹಳೇಬಾತಿ ಶ್ರೀ ಆಂಜನೇಯಸ್ವಾಮಿ ರಥೋತ್ಸ ವದ ಪ್ರಯುಕ್ತ ಶ್ರೀ ಸ್ವಾಮಿಯ ಆನೆ ಉತ್ಸವ ನಂತರ ಮಧ್ಯಾಹ್ನ 3 ಗಂಟೆಗೆ ಹರಿಸೇವೆ, ಮಧ್ಯಾಹ್ನ 4 ಗಂಟೆಗೆ ಬಾಯಿ ಬೀಗ, ಸಂಜೆ 6.30 ಕ್ಕೆ ದೊಗ್ಗಳ್ಳಿ ಶ್ರೀ ಆಂಜನೇಯ ಸ್ವಾಮಿಯನ್ನು ದೇವಸ್ಥಾನಕ್ಕೆ ಕರೆತರುವುದರೊಂದಿಗೆ ರಾತ್ರಿ 10.30 ಗಂಟೆಗೆ ಶ್ರೀ ಆಂಜನೇಯಸ್ವಾಮಿಯ ಮಹಾರಥೋತ್ಸವ ಜರುಗಿತು.
ಎಲೆಬೇತೂರಿನಲ್ಲಿ ಶ್ರೀ ಸವಗದ್ದಿಗೆ ಸಂಗಮೇಶ್ವರ ಮಹಾಸ್ವಾಮಿ ರಥೋತ್ಸವ
ಎಲೆಬೇತೂರು ಗ್ರಾಮದಲ್ಲಿ ಸಂಜೆ ಶ್ರೀ ಸವಗದ್ದಿಗೆ ಸಂಗಮೇಶ್ವರ ಮಹಾಸ್ವಾಮಿಯ ರಥೋತ್ಸವ ಭಕ್ತರ, ಗ್ರಾಮಸ್ಥರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.
ಬೂದಿಹಾಳ್ : ಸಂಭ್ರಮದ ರಥೋತ್ಸವ
ಮಲೇಬೆನ್ನೂರು : ಎರೇಬೂದಿಹಾಳ್ ಗ್ರಾಮದ ಶ್ರೀ ಬಸವೇಶ್ವರ ದೇವರ ರಥೋತ್ಸವವು ಗುರುವಾರ ಸಂಜೆ ಶ್ರೀ ಆಂಜನೇಯ ಸ್ವಾಮಿ, ಶ್ರೀ ಮಾರಿಕಾಂಭ, ಶ್ರೀ ದುರ್ಗಮ್ಮ ದೇವರುಗಳು ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿತು.
ಜಾಕ್ವೆಲ್ ಬಳಿ ನೀರಿಗೆ ಗುಂಡಿ ನಿರ್ಮಾಣ
ಹರಿಹರ : ಇಲ್ಲಿನ ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿದ್ದು, ನಗರಕ್ಕೆ ನೀರು ಪೂರೈಸುವ ಜಾಕ್ವೆಲ್ ಬಳಿ ಸಮರ್ಪಕ ನೀರು ನಿಲ್ಲುವಂತೆ ನಗರಸಭೆ ಪೌರಾಯುಕ್ತ ಐಗೂರು ಬಸವರಾಜ್ ಮತ್ತು ಜಲಸಿರಿ ಅಧಿ ಕಾರಿ ನವೀನ್ ಕುಮಾರ್ ಜೆಸಿಬಿಯಿಂದ ಗುಂಡಿ ತೆಗೆಸಿದರು.